ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿ ಆಂಬುಲೆನ್ಸ್ನಲ್ಲಿ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಎಲೆಮಾಳ ಮುಖ್ಯರಸ್ತೆಯ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.
ಕುರಟ್ಟಿ ಹೊಸೂರು ಗ್ರಾಮದ ಶಿಲ್ಪಾ ಅವರಿಗೆ ಮಂಗಳವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಂಬುಲೆನ್ಸ್ನಲ್ಲಿ ಕೌದಳ್ಳಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು.
ಅಲ್ಲಿನ ವೈದ್ಯರ ಸಲಹೆಯಂತೆ ಕೊಳ್ಳೇಗಾಲಕ್ಕೆ ಹೋಗುವಾಗಲೇ ಮಾರ್ಗ ಮಧ್ಯದಲ್ಲಿ ಆಂಬುಲೆನ್ಸ್ನಲ್ಲಿ ಹೆರಿಗೆಯಾಗಿದೆ.
ಆಂಬುಲೆನ್ಸ್ ಸಿಬ್ಬಂದಿ ರಾಣಿ, ನಾಗರಾಜು ಅವರು ಸಕಾಲಕ್ಕೆ ಚಿಕಿತ್ಸೆ ನೀಡಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…