ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿ ಆಂಬುಲೆನ್ಸ್ನಲ್ಲಿ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಎಲೆಮಾಳ ಮುಖ್ಯರಸ್ತೆಯ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.
ಕುರಟ್ಟಿ ಹೊಸೂರು ಗ್ರಾಮದ ಶಿಲ್ಪಾ ಅವರಿಗೆ ಮಂಗಳವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಂಬುಲೆನ್ಸ್ನಲ್ಲಿ ಕೌದಳ್ಳಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು.
ಅಲ್ಲಿನ ವೈದ್ಯರ ಸಲಹೆಯಂತೆ ಕೊಳ್ಳೇಗಾಲಕ್ಕೆ ಹೋಗುವಾಗಲೇ ಮಾರ್ಗ ಮಧ್ಯದಲ್ಲಿ ಆಂಬುಲೆನ್ಸ್ನಲ್ಲಿ ಹೆರಿಗೆಯಾಗಿದೆ.
ಆಂಬುಲೆನ್ಸ್ ಸಿಬ್ಬಂದಿ ರಾಣಿ, ನಾಗರಾಜು ಅವರು ಸಕಾಲಕ್ಕೆ ಚಿಕಿತ್ಸೆ ನೀಡಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…