ಚಾಮರಾಜನಗರ

ಚಾಮರಾಜನಗರ ಜಿಲ್ಲಾ ಕೋರ್ಟ್ ನೇಮಕಾತಿ 2022: ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ

ಚಾಮರಾಜನಗರ: ಜಿಲ್ಲಾ ನ್ಯಾಯಾಲಯದಲ್ಲಿ 2022ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30, 2022 ಕೊನೆ ದಿನಾಂಕವಾಗಿದೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 55 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಪಿಯುಸಿ, ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಜ್ಞಾನ ಇರಬೇಕು.

ಪದವಿ: ವಿಜ್ಞಾನ/ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯ. ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆ ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರತಕ್ಕದ್ದು.

ಕಂಪ್ಯೂಟರ್ ನಿರ್ವಹಣಾ ಜ್ಞಾನ: ಕಂಪ್ಯೂಟರ್ ಶಿಕ್ಷಣ ನೀಡುವ ಸಂಸ್ಥೆಯು ಪ್ರಧಾನ ಮಾಡುವ ಕಂಪ್ಯೂಟರ್ ಬೇಸಿಕ್ಸ್ ಕೋರ್ಸಿನ ಪ್ರಮಾಣ ಪತ್ರವನ್ನು ಹೊಂದಿರ ತಕ್ಕದ್ದು. ಟೈಪಿಂಗ್ ಪರೀಕ್ಷೆ ಪ್ರಮಾಣ ಪತ್ರ ಇದ್ದರೂ ಒಳ್ಳೆಯದು.

ವಯೋಮಿತಿ: ಜಿಲ್ಲಾ ನ್ಯಾಯಾಲಯದ ನೇಮಕಾತಿ ನೋಟಿಫಿಕೇಷನ್‌ನಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ವರ್ಷ(ನವೆಂಬರ್ 30, 2022). ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ/ಕೆಟಗೆರಿ 1 ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಕೆಟಗೆರಿ -2, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಸಿಗಲಿದೆ.

ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನ ಪರಿಶೀಲಿಸಿ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ವೈವಾ ವೋಸ್ ನಂತರ ವೈಯಕ್ತಿಕ ಸಂದರ್ಶನ.

ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1944 ಇವುಗಳ ಅನುಸಾರವಾಗಿ ಮಾಡಲಾಗುವುದು.

ಟೈಪಿಂಗ್ ಪರೀಕ್ಷೆ: 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 60 ಅಂಕ ಗಳಿಸಬೇಕು. ವೈವಾ ವೋಸಿಯಲ್ಲಿ 20 ಅಂಕಗಳಿಗೆ 10 ಅಂಕ ಪಡೆದುಕೊಳ್ಳಬೇಕು. ಒಟ್ಟಾರೆ 120
70 ಅಂಕ ಗಳಿಸಿದರೆ ಅರ್ಹರಾಗುತ್ತಾರೆ.

andolana

Recent Posts

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ…

28 mins ago

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

1 hour ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

2 hours ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

2 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

3 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

3 hours ago