ಚಾಮರಾಜನಗರ

ಚಾಮರಾಜನಗರ ಜಿಲ್ಲಾ ಕೋರ್ಟ್ ನೇಮಕಾತಿ 2022: ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ

ಚಾಮರಾಜನಗರ: ಜಿಲ್ಲಾ ನ್ಯಾಯಾಲಯದಲ್ಲಿ 2022ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30, 2022 ಕೊನೆ ದಿನಾಂಕವಾಗಿದೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 55 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಪಿಯುಸಿ, ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಜ್ಞಾನ ಇರಬೇಕು.

ಪದವಿ: ವಿಜ್ಞಾನ/ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯ. ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆ ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರತಕ್ಕದ್ದು.

ಕಂಪ್ಯೂಟರ್ ನಿರ್ವಹಣಾ ಜ್ಞಾನ: ಕಂಪ್ಯೂಟರ್ ಶಿಕ್ಷಣ ನೀಡುವ ಸಂಸ್ಥೆಯು ಪ್ರಧಾನ ಮಾಡುವ ಕಂಪ್ಯೂಟರ್ ಬೇಸಿಕ್ಸ್ ಕೋರ್ಸಿನ ಪ್ರಮಾಣ ಪತ್ರವನ್ನು ಹೊಂದಿರ ತಕ್ಕದ್ದು. ಟೈಪಿಂಗ್ ಪರೀಕ್ಷೆ ಪ್ರಮಾಣ ಪತ್ರ ಇದ್ದರೂ ಒಳ್ಳೆಯದು.

ವಯೋಮಿತಿ: ಜಿಲ್ಲಾ ನ್ಯಾಯಾಲಯದ ನೇಮಕಾತಿ ನೋಟಿಫಿಕೇಷನ್‌ನಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ವರ್ಷ(ನವೆಂಬರ್ 30, 2022). ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ/ಕೆಟಗೆರಿ 1 ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಕೆಟಗೆರಿ -2, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಸಿಗಲಿದೆ.

ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನ ಪರಿಶೀಲಿಸಿ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ವೈವಾ ವೋಸ್ ನಂತರ ವೈಯಕ್ತಿಕ ಸಂದರ್ಶನ.

ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1944 ಇವುಗಳ ಅನುಸಾರವಾಗಿ ಮಾಡಲಾಗುವುದು.

ಟೈಪಿಂಗ್ ಪರೀಕ್ಷೆ: 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 60 ಅಂಕ ಗಳಿಸಬೇಕು. ವೈವಾ ವೋಸಿಯಲ್ಲಿ 20 ಅಂಕಗಳಿಗೆ 10 ಅಂಕ ಪಡೆದುಕೊಳ್ಳಬೇಕು. ಒಟ್ಟಾರೆ 120
70 ಅಂಕ ಗಳಿಸಿದರೆ ಅರ್ಹರಾಗುತ್ತಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

32 seconds ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

28 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago