ಚಾಮರಾಜನಗರ

ಚಾಮರಾಜನಗರ ಜಿಲ್ಲಾ ಕೋರ್ಟ್ ನೇಮಕಾತಿ 2022: ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ

ಚಾಮರಾಜನಗರ: ಜಿಲ್ಲಾ ನ್ಯಾಯಾಲಯದಲ್ಲಿ 2022ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30, 2022 ಕೊನೆ ದಿನಾಂಕವಾಗಿದೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 55 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಪಿಯುಸಿ, ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಜ್ಞಾನ ಇರಬೇಕು.

ಪದವಿ: ವಿಜ್ಞಾನ/ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯ. ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆ ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರತಕ್ಕದ್ದು.

ಕಂಪ್ಯೂಟರ್ ನಿರ್ವಹಣಾ ಜ್ಞಾನ: ಕಂಪ್ಯೂಟರ್ ಶಿಕ್ಷಣ ನೀಡುವ ಸಂಸ್ಥೆಯು ಪ್ರಧಾನ ಮಾಡುವ ಕಂಪ್ಯೂಟರ್ ಬೇಸಿಕ್ಸ್ ಕೋರ್ಸಿನ ಪ್ರಮಾಣ ಪತ್ರವನ್ನು ಹೊಂದಿರ ತಕ್ಕದ್ದು. ಟೈಪಿಂಗ್ ಪರೀಕ್ಷೆ ಪ್ರಮಾಣ ಪತ್ರ ಇದ್ದರೂ ಒಳ್ಳೆಯದು.

ವಯೋಮಿತಿ: ಜಿಲ್ಲಾ ನ್ಯಾಯಾಲಯದ ನೇಮಕಾತಿ ನೋಟಿಫಿಕೇಷನ್‌ನಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ವರ್ಷ(ನವೆಂಬರ್ 30, 2022). ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ/ಕೆಟಗೆರಿ 1 ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಕೆಟಗೆರಿ -2, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಸಿಗಲಿದೆ.

ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನ ಪರಿಶೀಲಿಸಿ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ವೈವಾ ವೋಸ್ ನಂತರ ವೈಯಕ್ತಿಕ ಸಂದರ್ಶನ.

ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1944 ಇವುಗಳ ಅನುಸಾರವಾಗಿ ಮಾಡಲಾಗುವುದು.

ಟೈಪಿಂಗ್ ಪರೀಕ್ಷೆ: 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 60 ಅಂಕ ಗಳಿಸಬೇಕು. ವೈವಾ ವೋಸಿಯಲ್ಲಿ 20 ಅಂಕಗಳಿಗೆ 10 ಅಂಕ ಪಡೆದುಕೊಳ್ಳಬೇಕು. ಒಟ್ಟಾರೆ 120
70 ಅಂಕ ಗಳಿಸಿದರೆ ಅರ್ಹರಾಗುತ್ತಾರೆ.

andolana

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

8 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

8 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

8 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

8 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

12 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

13 hours ago