ಚಾಮರಾಜನಗರ

ಚಾಮರಾಜನಗರ ಜಿಲ್ಲಾ ಕೋರ್ಟ್ ನೇಮಕಾತಿ 2022: ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ

ಚಾಮರಾಜನಗರ: ಜಿಲ್ಲಾ ನ್ಯಾಯಾಲಯದಲ್ಲಿ 2022ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30, 2022 ಕೊನೆ ದಿನಾಂಕವಾಗಿದೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 55 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಪಿಯುಸಿ, ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಜ್ಞಾನ ಇರಬೇಕು.

ಪದವಿ: ವಿಜ್ಞಾನ/ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯ. ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆ ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರತಕ್ಕದ್ದು.

ಕಂಪ್ಯೂಟರ್ ನಿರ್ವಹಣಾ ಜ್ಞಾನ: ಕಂಪ್ಯೂಟರ್ ಶಿಕ್ಷಣ ನೀಡುವ ಸಂಸ್ಥೆಯು ಪ್ರಧಾನ ಮಾಡುವ ಕಂಪ್ಯೂಟರ್ ಬೇಸಿಕ್ಸ್ ಕೋರ್ಸಿನ ಪ್ರಮಾಣ ಪತ್ರವನ್ನು ಹೊಂದಿರ ತಕ್ಕದ್ದು. ಟೈಪಿಂಗ್ ಪರೀಕ್ಷೆ ಪ್ರಮಾಣ ಪತ್ರ ಇದ್ದರೂ ಒಳ್ಳೆಯದು.

ವಯೋಮಿತಿ: ಜಿಲ್ಲಾ ನ್ಯಾಯಾಲಯದ ನೇಮಕಾತಿ ನೋಟಿಫಿಕೇಷನ್‌ನಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ವರ್ಷ(ನವೆಂಬರ್ 30, 2022). ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ/ಕೆಟಗೆರಿ 1 ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಕೆಟಗೆರಿ -2, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಸಿಗಲಿದೆ.

ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನ ಪರಿಶೀಲಿಸಿ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ವೈವಾ ವೋಸ್ ನಂತರ ವೈಯಕ್ತಿಕ ಸಂದರ್ಶನ.

ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1944 ಇವುಗಳ ಅನುಸಾರವಾಗಿ ಮಾಡಲಾಗುವುದು.

ಟೈಪಿಂಗ್ ಪರೀಕ್ಷೆ: 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 60 ಅಂಕ ಗಳಿಸಬೇಕು. ವೈವಾ ವೋಸಿಯಲ್ಲಿ 20 ಅಂಕಗಳಿಗೆ 10 ಅಂಕ ಪಡೆದುಕೊಳ್ಳಬೇಕು. ಒಟ್ಟಾರೆ 120
70 ಅಂಕ ಗಳಿಸಿದರೆ ಅರ್ಹರಾಗುತ್ತಾರೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago