ಚಾಮರಾಜನಗರ

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಗೋವಾದಲ್ಲಿ ಶನಿವಾರವಷ್ಟೇ ಫಿಟ್ನೆಸ್ ಇಂಟರ್‌ನ್ಯಾಷನಲ್ ಫೆಡರೇಷನ್ ವತಿಯಿಂದ ನಡೆದ ಈ ಸ್ಪರ್ಧೆಯಲ್ಲಿ ಪಿಜಿಕ್ಯೂ ಸೀನಿಯರ್ ಹಾಗೂ ಜೂನಿಯರ್ ಓವರಾಲ್ ಚಾಂಪಿಯನ್‌ಷಿಪ್ ತನ್ನದಾಗಿಸಿಕೊಂಡು ಪದಕ, ಎರಡು ದೊಡ್ಡ ಟ್ರೋಫಿ ಹಾಗೂ ಬಹುಮಾನ ಪಡೆದು ಜಿಲ್ಲೆ, ರಾಜ್ಯ, ದೇಶಕ್ಕೆ ಕೀರ್ತಿ ತಂದಿದ್ದಾರೆ.

ಬಸವನಪುರ ಗ್ರಾಮದ ರೈತ ಬಿ.ಜಿ ರವಿಕುಮಾರ್ ,ಹೇಮಾ ದಂಪತಿಯ ಪುತ್ರರಾದ ೨೩ರ ಹರೆಯದ ಬಿ.ಆರ್.ಹೇಮಂತ್ ಎಂಬಿಎ ಪದವಿಯನ್ನು ಈಚೆಗೆ ಮುಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿ ಅವರದ್ದಾಗಿದೆ.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಸ್ಥಳೀಯವಾಗಿಯೇ ಓದಿರುವ ಅವರು ಪದವಿಯನ್ನು ಆಳ್ವಾಸ್ ನಲ್ಲಿ ಮಾಡಿದ್ದು ಫಿಟ್ನೆಸ್ ಅನ್ನು ಶ್ರಮದಿಂದ ಮಾತ್ರ ಗಳಿಸಬಹುದು. ಹಣದಿಂದ ಗಿಟ್ಟಿಸಲು ಸಾಧ್ಯವಿಲ್ಲ. ಹೀಗಾಗಿ ಶ್ರಮ ಬೇಡುವ ಈ ಕ್ಷೇತ್ರ ಆಯ್ಕೆ ಮಾಡಿಕೊಂಡು ಸಾಧಿಸುವ ಹಂಬಲ,ಛಲದತ್ತ ನನ್ನ ಪ್ರಯತ್ನ ಸಾಗಿದೆ ಎಂದು ಹೇಮಂತ್ ಹೇಳಿದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

10 seconds ago

ಮರ್ಯಾದೆಗೇಡೆ ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

26 mins ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

1 hour ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

1 hour ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

1 hour ago

ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…

2 hours ago