ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಗೋವಾದಲ್ಲಿ ಶನಿವಾರವಷ್ಟೇ ಫಿಟ್ನೆಸ್ ಇಂಟರ್ನ್ಯಾಷನಲ್ ಫೆಡರೇಷನ್ ವತಿಯಿಂದ ನಡೆದ ಈ ಸ್ಪರ್ಧೆಯಲ್ಲಿ ಪಿಜಿಕ್ಯೂ ಸೀನಿಯರ್ ಹಾಗೂ ಜೂನಿಯರ್ ಓವರಾಲ್ ಚಾಂಪಿಯನ್ಷಿಪ್ ತನ್ನದಾಗಿಸಿಕೊಂಡು ಪದಕ, ಎರಡು ದೊಡ್ಡ ಟ್ರೋಫಿ ಹಾಗೂ ಬಹುಮಾನ ಪಡೆದು ಜಿಲ್ಲೆ, ರಾಜ್ಯ, ದೇಶಕ್ಕೆ ಕೀರ್ತಿ ತಂದಿದ್ದಾರೆ.
ಬಸವನಪುರ ಗ್ರಾಮದ ರೈತ ಬಿ.ಜಿ ರವಿಕುಮಾರ್ ,ಹೇಮಾ ದಂಪತಿಯ ಪುತ್ರರಾದ ೨೩ರ ಹರೆಯದ ಬಿ.ಆರ್.ಹೇಮಂತ್ ಎಂಬಿಎ ಪದವಿಯನ್ನು ಈಚೆಗೆ ಮುಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿ ಅವರದ್ದಾಗಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಸ್ಥಳೀಯವಾಗಿಯೇ ಓದಿರುವ ಅವರು ಪದವಿಯನ್ನು ಆಳ್ವಾಸ್ ನಲ್ಲಿ ಮಾಡಿದ್ದು ಫಿಟ್ನೆಸ್ ಅನ್ನು ಶ್ರಮದಿಂದ ಮಾತ್ರ ಗಳಿಸಬಹುದು. ಹಣದಿಂದ ಗಿಟ್ಟಿಸಲು ಸಾಧ್ಯವಿಲ್ಲ. ಹೀಗಾಗಿ ಶ್ರಮ ಬೇಡುವ ಈ ಕ್ಷೇತ್ರ ಆಯ್ಕೆ ಮಾಡಿಕೊಂಡು ಸಾಧಿಸುವ ಹಂಬಲ,ಛಲದತ್ತ ನನ್ನ ಪ್ರಯತ್ನ ಸಾಗಿದೆ ಎಂದು ಹೇಮಂತ್ ಹೇಳಿದರು.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…