ಚಾಮರಾಜನಗರ : ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸರ್ಕಾರಿ ಹುದ್ದೆಗಳ ನೇಮಕಾತಿ ಪತ್ರ ವಿತರಿಸಿದರು.
ಗುಂಡ್ಲುಪೇಟೆಯ ದೇವರಾಜ ಅರಸು ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ 25 ಮಂದಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರ ಮಾಡಿದರು.
ಸಂಸತ್ರಸ್ತರಿಗೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಭೋಧನಾ ಆಸ್ಪತ್ರೆಯಲ್ಲಿ ವಿವಿಧ ವೃಂದದ ಉದ್ಯೋಗಗಳನ್ನು ನೀಡಲಾಗಿದೆ.
ಆಮ್ಲಜನಕ ಸಿಗದೆ ಧಾರುಣವಾಗಿ 34 ಮಂದಿ ಮೃತಪಟ್ಟಿದ್ದಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಭಾರತ್ ಜೋಡೋ ಪಾದಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರು ಮೃತಪಟ್ಟವರು ಕುಟುಂಬ ಸದಸ್ಯರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.
ಇದೀಗ ಅಂತಿಮವಾಗಿ ಸಂತ್ರಸ್ತರ ಬೇಡಿಕೆ ಈಡೇರಿದ್ದು, ಸಿಎಂ ಹಾಗೂ ಡಿಸಿಎಂ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…