ಚಾಮರಾಜನಗರ: ಅಕ್ರಮ ಮದ್ಯ ಮಾರಾಟ ಮಾಡಿದರೆ 1ಲಕ್ಷ ರೂ. ದಂಡ ವಿಧಿಸುವುದಾಗಿ ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮಸ್ಥರು ಸೋಮವಾರ ನಿರ್ಣಯ ಕೈಗೊಂಡಿದ್ದಾರೆ.
ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ ಜನರು ಕುಡಿತದ ವ್ಯಸನಿಗಳಾಗಿ ತಮ್ಮ ಸಂಸಾರವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಅಕ್ರಮ ಮದ್ಯ ಮಾರಾಟ ನಿಲ್ಲಿಸುವ ಉದ್ದೇಶದಿಂದ ಊರಿನ ಗ್ರಾಮಸ್ಥರು ಈ ನಿರ್ಣಯ ಕೈಗೊಂಡಿದ್ದಾರೆ.
ಅಕ್ರಮವಾಗಿ ಮದ್ಯ ಮಾರಾಟ ಮಾಡುವವರಿಗೆ 1 ಲಕ್ಷ ರೂ ದಂಡ, ಮದ್ಯ ಮಾರಾಟದ ಸುಳಿವು ನೀಡಿದವರಿಗೆ 10 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಗ್ರಾಮಸ್ಥರು ಘೋಷಿಸಿದ್ದಾರೆ.
ಇನ್ನು ಅಕ್ರಮ ಮದ್ಯ ಮಾರಾಟ ಮಾಡಿ ಜೈಲು ಸೇರಿದವನಿಗೆ ಜಾಮೀನು ಕೊಟ್ಟರೇ 2 ಲಕ್ಷ ರೂ. ದಂಡ ವಿಧಿಸುವುದಾಗಿ ನಿರ್ಧಾರ ಮಾಡಿದ್ದಾರೆ.
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…