ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಇದೇ ಜುಲೈ.7ರಂದು ಎರಡನೇ ವರ್ಷದ ಶ್ರೀ ಬಸವವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಅಂದು ಶ್ರೀ ಬಸವ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿರುವ ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿ ಮೆರವಣಿಗೆಗೆ ಚಾಮರಾಜನಗರ ವಿರಕ್ತ ಮಠಾಧ್ಯಕ್ಷರಾದ ಶ್ರೀ ಚನ್ನಬಸವಸ್ವಾಮಿಗಳು ನಂದಿಕಂಬಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದಾರೆ.
ಶ್ರೀ ಬಸವೇಶ್ವರ ಮೂರ್ತಿಯ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ನಂದಿಕಂಬಗಳು ಹಾಗೂ ವಿವಿಧ ಜಾನಪದ ಕಲಾ ತಂಡಗಳು ಭಾಗಿಯಾಗಲಿವೆ. ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಮೆರವಣಿಗೆ ಊರ ತುಂಬೆಲ್ಲಾ ಸಾಗಲಿದೆ.
ಇನ್ನೂ ಬಸವ ಜಯಂತಿ ಅಂಗವಾಗಿ ಸಂಜೆ 7 ಗಂಟೆಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ರಾತ್ರಿ ವೇಳೆಗೆ ಶಿವಕಥೆಯನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಬಸವೇಶ್ವರ ಜಯಂತಿಗೆ ಆಗಮಿಸಿ ಶ್ರೀ ಬಸವೇಶ್ವರರ ಕೃಪೆಗೆ ಪಾತ್ರರಾಗಬಹುದಾಗಿದೆ.
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
ಮೈಸೂರು : ಮೈಸೂರು-ಜೋಧ್ಪುರ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…
ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…