ಚಾಮರಾಜನಗರ

ಗರಿಗೆದರಿದ ಚಾಮರಾಜನಗರ ಲೋಕಲ್‌ ರಾಜಕೀಯ

ಚಾಮರಾಜನಗರ: ಕೊನೆಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಚಾಮರಾಜನಗರ, ಕೊಳ್ಳೇಗಾಲದಲ್ಲಿ ನಗರಸಭೆ ಅಸ್ತಿತ್ವದಲ್ಲಿದ್ದು, ಮೀಸಲು ನಿಗದಿಯಾಗದ ಕಾರಣಕ್ಕೆ ಕಳೆದ ಒಂದು ವರ್ಷ ಮೂರು ತಿಂಗಳಿನಿಂದಲೂ ಎರಡು ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳೆರಡು ಖಾಲಿ ಇದ್ದವು.

ಇನ್ನು ಗುಂಡ್ಲುಪೇಟೆ ಪುರಸಭೆ, ಹನೂರು ಹಾಗೂ ಯಳಂದೂರು ಪಟ್ಟಣ ಪಂಚಾಯಿತಿಗಳಲ್ಲೂ ಇದೇ ಸಮಸ್ಯೆಯಾಗಿದೆ. ಒಟ್ಟಾರೆ ಎಲ್ಲೆಡೆಯು ಪಕ್ಷೇತರರು, ಜಾತ್ಯಾತೀತ ಜನತಾದಳ ಹಾಗೂ ಬಿಎಸ್‌ಪಿಯ ಸದಸ್ಯರು ನಿರ್ಣಾಯಕ ಪಾತ್ರ ವಹಿಸಲಿದ್ದು, ಬಹು ಬೇಡಿಕೆಯಲ್ಲಿರುತ್ತಾರೆ.

ಚಾಮರಾಜನಗರ ನಗರಸಭೆಯಲ್ಲಿ ಒಟ್ಟು 31 ಸ್ಥಾನಗಳಿಗೆ ಬಿಜೆಪಿ 15, ಕಾಂಗ್ರೆಸ್‌ 8, ಎಸ್‌ಡಿಪಿಐ 6, ಬಿಎಸ್‌ಪಿ ಹಾಗೂ ಪಕ್ಷೇತರ ತಲಾ ಒಂದು ಸ್ಥಾನಗಳನ್ನು ಗೆದ್ದಿವೆ. ಸದ್ಯ ಬಿಜೆಪಿ ಹೆಚ್ಚಿನ ಸ್ಥಾನ ಪಡೆದಿದ್ದು, ಅಧಿಕಾರ ಹಿರಿಯಬೇಕಾದರೆ ಇನ್ನು 2 ಮತಗಳ ಬೆಂಬಲ ಅಗತ್ಯವಿದೆ. ಬಿಜೆಪಿ ಮೊದಲ ಅವಧಿಯಲ್ಲಿ ಆಡಳಿತ ನಡೆಸಿತ್ತು. ಇದೀಗ ಎರಡನೇ ಅವಧಿಗೂ ಆ ಪಕ್ಷಕ್ಕೆ ಅವಕಾಶವಿದೆ.

ಇನ್ನು ಕಾಂಗ್ರೆಸ್‌ ಪಕ್ಷಕ್ಕೆ ತನ್ನ 8 ಸ್ಥಾನದೊಂದಿಗೆ ಶಾಸಕ, ಸಂಸದರ ಮತ ಬಲವೂ ಸೇರಿದಂತೆ 10 ಹಾಗೂ ಎಸ್‌ಡಿಪಿಐನ 6 ಹಾಗೂ ಪಕ್ಷೇತರ ಅಥವಾ ಬಿಎಸ್‌ಪಿ ಬೆಂಬಲ ಪಡೆದರೆ ಆ ಪಕ್ಷಕ್ಕೂ ಅಧಿಕಾರಕ್ಕೇರುವ ಅವಕಾಶವಿದೆ.

ಇನ್ನು ಕೊಳ್ಳೇಗಾಲದಲ್ಲಿ ಪಕ್ಷೇತರ ನಿರ್ಣಾಯಕವಾಗಿದ್ದು, ಗುಂಡ್ಲುಪೇಟೆಯಲ್ಲಿ ಬಿಜೆಪಿಗೆ ಬಹುಮತವಿದೆ. ಇದೆಲ್ಲಾ ಬೆಳವಣಿಗೆಗಳ ನಡುವೆ ಯಾರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

41 seconds ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

5 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

5 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

5 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

14 hours ago