ಚಾಮರಾಜನಗರ: ಕೊನೆಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಚಾಮರಾಜನಗರ, ಕೊಳ್ಳೇಗಾಲದಲ್ಲಿ ನಗರಸಭೆ ಅಸ್ತಿತ್ವದಲ್ಲಿದ್ದು, ಮೀಸಲು ನಿಗದಿಯಾಗದ ಕಾರಣಕ್ಕೆ ಕಳೆದ ಒಂದು ವರ್ಷ ಮೂರು ತಿಂಗಳಿನಿಂದಲೂ ಎರಡು ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳೆರಡು ಖಾಲಿ ಇದ್ದವು.
ಇನ್ನು ಗುಂಡ್ಲುಪೇಟೆ ಪುರಸಭೆ, ಹನೂರು ಹಾಗೂ ಯಳಂದೂರು ಪಟ್ಟಣ ಪಂಚಾಯಿತಿಗಳಲ್ಲೂ ಇದೇ ಸಮಸ್ಯೆಯಾಗಿದೆ. ಒಟ್ಟಾರೆ ಎಲ್ಲೆಡೆಯು ಪಕ್ಷೇತರರು, ಜಾತ್ಯಾತೀತ ಜನತಾದಳ ಹಾಗೂ ಬಿಎಸ್ಪಿಯ ಸದಸ್ಯರು ನಿರ್ಣಾಯಕ ಪಾತ್ರ ವಹಿಸಲಿದ್ದು, ಬಹು ಬೇಡಿಕೆಯಲ್ಲಿರುತ್ತಾರೆ.
ಚಾಮರಾಜನಗರ ನಗರಸಭೆಯಲ್ಲಿ ಒಟ್ಟು 31 ಸ್ಥಾನಗಳಿಗೆ ಬಿಜೆಪಿ 15, ಕಾಂಗ್ರೆಸ್ 8, ಎಸ್ಡಿಪಿಐ 6, ಬಿಎಸ್ಪಿ ಹಾಗೂ ಪಕ್ಷೇತರ ತಲಾ ಒಂದು ಸ್ಥಾನಗಳನ್ನು ಗೆದ್ದಿವೆ. ಸದ್ಯ ಬಿಜೆಪಿ ಹೆಚ್ಚಿನ ಸ್ಥಾನ ಪಡೆದಿದ್ದು, ಅಧಿಕಾರ ಹಿರಿಯಬೇಕಾದರೆ ಇನ್ನು 2 ಮತಗಳ ಬೆಂಬಲ ಅಗತ್ಯವಿದೆ. ಬಿಜೆಪಿ ಮೊದಲ ಅವಧಿಯಲ್ಲಿ ಆಡಳಿತ ನಡೆಸಿತ್ತು. ಇದೀಗ ಎರಡನೇ ಅವಧಿಗೂ ಆ ಪಕ್ಷಕ್ಕೆ ಅವಕಾಶವಿದೆ.
ಇನ್ನು ಕಾಂಗ್ರೆಸ್ ಪಕ್ಷಕ್ಕೆ ತನ್ನ 8 ಸ್ಥಾನದೊಂದಿಗೆ ಶಾಸಕ, ಸಂಸದರ ಮತ ಬಲವೂ ಸೇರಿದಂತೆ 10 ಹಾಗೂ ಎಸ್ಡಿಪಿಐನ 6 ಹಾಗೂ ಪಕ್ಷೇತರ ಅಥವಾ ಬಿಎಸ್ಪಿ ಬೆಂಬಲ ಪಡೆದರೆ ಆ ಪಕ್ಷಕ್ಕೂ ಅಧಿಕಾರಕ್ಕೇರುವ ಅವಕಾಶವಿದೆ.
ಇನ್ನು ಕೊಳ್ಳೇಗಾಲದಲ್ಲಿ ಪಕ್ಷೇತರ ನಿರ್ಣಾಯಕವಾಗಿದ್ದು, ಗುಂಡ್ಲುಪೇಟೆಯಲ್ಲಿ ಬಿಜೆಪಿಗೆ ಬಹುಮತವಿದೆ. ಇದೆಲ್ಲಾ ಬೆಳವಣಿಗೆಗಳ ನಡುವೆ ಯಾರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…