ಚಾಮರಾಜನಗರ

ಗರಿಗೆದರಿದ ಚಾಮರಾಜನಗರ ಲೋಕಲ್‌ ರಾಜಕೀಯ

ಚಾಮರಾಜನಗರ: ಕೊನೆಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಚಾಮರಾಜನಗರ, ಕೊಳ್ಳೇಗಾಲದಲ್ಲಿ ನಗರಸಭೆ ಅಸ್ತಿತ್ವದಲ್ಲಿದ್ದು, ಮೀಸಲು ನಿಗದಿಯಾಗದ ಕಾರಣಕ್ಕೆ ಕಳೆದ ಒಂದು ವರ್ಷ ಮೂರು ತಿಂಗಳಿನಿಂದಲೂ ಎರಡು ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳೆರಡು ಖಾಲಿ ಇದ್ದವು.

ಇನ್ನು ಗುಂಡ್ಲುಪೇಟೆ ಪುರಸಭೆ, ಹನೂರು ಹಾಗೂ ಯಳಂದೂರು ಪಟ್ಟಣ ಪಂಚಾಯಿತಿಗಳಲ್ಲೂ ಇದೇ ಸಮಸ್ಯೆಯಾಗಿದೆ. ಒಟ್ಟಾರೆ ಎಲ್ಲೆಡೆಯು ಪಕ್ಷೇತರರು, ಜಾತ್ಯಾತೀತ ಜನತಾದಳ ಹಾಗೂ ಬಿಎಸ್‌ಪಿಯ ಸದಸ್ಯರು ನಿರ್ಣಾಯಕ ಪಾತ್ರ ವಹಿಸಲಿದ್ದು, ಬಹು ಬೇಡಿಕೆಯಲ್ಲಿರುತ್ತಾರೆ.

ಚಾಮರಾಜನಗರ ನಗರಸಭೆಯಲ್ಲಿ ಒಟ್ಟು 31 ಸ್ಥಾನಗಳಿಗೆ ಬಿಜೆಪಿ 15, ಕಾಂಗ್ರೆಸ್‌ 8, ಎಸ್‌ಡಿಪಿಐ 6, ಬಿಎಸ್‌ಪಿ ಹಾಗೂ ಪಕ್ಷೇತರ ತಲಾ ಒಂದು ಸ್ಥಾನಗಳನ್ನು ಗೆದ್ದಿವೆ. ಸದ್ಯ ಬಿಜೆಪಿ ಹೆಚ್ಚಿನ ಸ್ಥಾನ ಪಡೆದಿದ್ದು, ಅಧಿಕಾರ ಹಿರಿಯಬೇಕಾದರೆ ಇನ್ನು 2 ಮತಗಳ ಬೆಂಬಲ ಅಗತ್ಯವಿದೆ. ಬಿಜೆಪಿ ಮೊದಲ ಅವಧಿಯಲ್ಲಿ ಆಡಳಿತ ನಡೆಸಿತ್ತು. ಇದೀಗ ಎರಡನೇ ಅವಧಿಗೂ ಆ ಪಕ್ಷಕ್ಕೆ ಅವಕಾಶವಿದೆ.

ಇನ್ನು ಕಾಂಗ್ರೆಸ್‌ ಪಕ್ಷಕ್ಕೆ ತನ್ನ 8 ಸ್ಥಾನದೊಂದಿಗೆ ಶಾಸಕ, ಸಂಸದರ ಮತ ಬಲವೂ ಸೇರಿದಂತೆ 10 ಹಾಗೂ ಎಸ್‌ಡಿಪಿಐನ 6 ಹಾಗೂ ಪಕ್ಷೇತರ ಅಥವಾ ಬಿಎಸ್‌ಪಿ ಬೆಂಬಲ ಪಡೆದರೆ ಆ ಪಕ್ಷಕ್ಕೂ ಅಧಿಕಾರಕ್ಕೇರುವ ಅವಕಾಶವಿದೆ.

ಇನ್ನು ಕೊಳ್ಳೇಗಾಲದಲ್ಲಿ ಪಕ್ಷೇತರ ನಿರ್ಣಾಯಕವಾಗಿದ್ದು, ಗುಂಡ್ಲುಪೇಟೆಯಲ್ಲಿ ಬಿಜೆಪಿಗೆ ಬಹುಮತವಿದೆ. ಇದೆಲ್ಲಾ ಬೆಳವಣಿಗೆಗಳ ನಡುವೆ ಯಾರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

7 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

9 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

12 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

16 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

20 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

20 hours ago