ಚಾಮರಾಜನಗರ

ಗರಿಗೆದರಿದ ಚಾಮರಾಜನಗರ ಲೋಕಲ್‌ ರಾಜಕೀಯ

ಚಾಮರಾಜನಗರ: ಕೊನೆಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಚಾಮರಾಜನಗರ, ಕೊಳ್ಳೇಗಾಲದಲ್ಲಿ ನಗರಸಭೆ ಅಸ್ತಿತ್ವದಲ್ಲಿದ್ದು, ಮೀಸಲು ನಿಗದಿಯಾಗದ ಕಾರಣಕ್ಕೆ ಕಳೆದ ಒಂದು ವರ್ಷ ಮೂರು ತಿಂಗಳಿನಿಂದಲೂ ಎರಡು ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳೆರಡು ಖಾಲಿ ಇದ್ದವು.

ಇನ್ನು ಗುಂಡ್ಲುಪೇಟೆ ಪುರಸಭೆ, ಹನೂರು ಹಾಗೂ ಯಳಂದೂರು ಪಟ್ಟಣ ಪಂಚಾಯಿತಿಗಳಲ್ಲೂ ಇದೇ ಸಮಸ್ಯೆಯಾಗಿದೆ. ಒಟ್ಟಾರೆ ಎಲ್ಲೆಡೆಯು ಪಕ್ಷೇತರರು, ಜಾತ್ಯಾತೀತ ಜನತಾದಳ ಹಾಗೂ ಬಿಎಸ್‌ಪಿಯ ಸದಸ್ಯರು ನಿರ್ಣಾಯಕ ಪಾತ್ರ ವಹಿಸಲಿದ್ದು, ಬಹು ಬೇಡಿಕೆಯಲ್ಲಿರುತ್ತಾರೆ.

ಚಾಮರಾಜನಗರ ನಗರಸಭೆಯಲ್ಲಿ ಒಟ್ಟು 31 ಸ್ಥಾನಗಳಿಗೆ ಬಿಜೆಪಿ 15, ಕಾಂಗ್ರೆಸ್‌ 8, ಎಸ್‌ಡಿಪಿಐ 6, ಬಿಎಸ್‌ಪಿ ಹಾಗೂ ಪಕ್ಷೇತರ ತಲಾ ಒಂದು ಸ್ಥಾನಗಳನ್ನು ಗೆದ್ದಿವೆ. ಸದ್ಯ ಬಿಜೆಪಿ ಹೆಚ್ಚಿನ ಸ್ಥಾನ ಪಡೆದಿದ್ದು, ಅಧಿಕಾರ ಹಿರಿಯಬೇಕಾದರೆ ಇನ್ನು 2 ಮತಗಳ ಬೆಂಬಲ ಅಗತ್ಯವಿದೆ. ಬಿಜೆಪಿ ಮೊದಲ ಅವಧಿಯಲ್ಲಿ ಆಡಳಿತ ನಡೆಸಿತ್ತು. ಇದೀಗ ಎರಡನೇ ಅವಧಿಗೂ ಆ ಪಕ್ಷಕ್ಕೆ ಅವಕಾಶವಿದೆ.

ಇನ್ನು ಕಾಂಗ್ರೆಸ್‌ ಪಕ್ಷಕ್ಕೆ ತನ್ನ 8 ಸ್ಥಾನದೊಂದಿಗೆ ಶಾಸಕ, ಸಂಸದರ ಮತ ಬಲವೂ ಸೇರಿದಂತೆ 10 ಹಾಗೂ ಎಸ್‌ಡಿಪಿಐನ 6 ಹಾಗೂ ಪಕ್ಷೇತರ ಅಥವಾ ಬಿಎಸ್‌ಪಿ ಬೆಂಬಲ ಪಡೆದರೆ ಆ ಪಕ್ಷಕ್ಕೂ ಅಧಿಕಾರಕ್ಕೇರುವ ಅವಕಾಶವಿದೆ.

ಇನ್ನು ಕೊಳ್ಳೇಗಾಲದಲ್ಲಿ ಪಕ್ಷೇತರ ನಿರ್ಣಾಯಕವಾಗಿದ್ದು, ಗುಂಡ್ಲುಪೇಟೆಯಲ್ಲಿ ಬಿಜೆಪಿಗೆ ಬಹುಮತವಿದೆ. ಇದೆಲ್ಲಾ ಬೆಳವಣಿಗೆಗಳ ನಡುವೆ ಯಾರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

8 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

10 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

10 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

10 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago