ಚಾಮರಾಜನಗರ

ಚಾಮರಾಜನಗರ ಆಕ್ಸಿಜನ್‌ದುರಂತ: 3 ವರ್ಷವಾದ್ರೂ ನಿಲ್ಲದ ಸಂತ್ರಸ್ತರ ಗೋಳು

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್‌ದುರಂತ ನಡೆದು ಮೂರು ವರ್ಷಗಳಾಯ್ತು. ಇನ್ನೂ ಕೂಡ ಸಂತ್ರಸ್ತರ ಗೋಳು ಮಾತ್ರ ಕಡಿಮೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಕ್ಕಿಲ್ಲ.

ಇನ್ನೂ ಸರ್ಕಾರ ಹಾಗೂ ಜಿಲ್ಲಾಡಳಿತ ಗುತ್ತಿಗೆ ಆಧಾರದ ಮೇಲೆ ಕೆಲಸವೇನೊ ಕೊಟ್ಟಿದೆ. ಆದ್ರೆ ಹೊರಗುತ್ತಿಗೆ ಆದೇಶ, ಹಾಜರಾತಿ, ವೇತನ ಮಂಜೂರು ಮಾಡಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮವೂ ಆಗಿಲ್ಲವೆಂದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ ಕೋವಿಡ್‌ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ದುರಂತ ಇಡೀ ದೇಶದ ಗಮನ ಸೆಳೆದಿತ್ತು. ಒಂದೇ ರಾತ್ರಿ ಆಕ್ಸಿಜನ್‌ಕೊರತೆಯಿಂದ 36 ಮಂದಿ ಸಾವನ್ನಪ್ಪಿದ್ದರು. ಆ ವೇಳೆ ಕಾಂಗ್ರೆಸ್‌ಪಕ್ಷದ ನಾಯಕರು ಬಿಜೆಪಿ ಸರ್ಕಾರ ದ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಭಾರತ್‌ಜೋಡೋ ಯಾತ್ರೆಯ ವೇಳೆ ಸರ್ಕಾರಿ ನೌಕರಿಯ ಭರವಸೆ ಕೊಟ್ಟಿದ್ದರು.

ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ಸರ್ಕಾರ ಅಸ್ತಿತ್ವದಲ್ಲಿದೆ. ಆದ್ರೂ ಕೂಡ ಸಂತ್ರಸ್ತರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ಕೊಡುವ ಭರವಸೆ ಮಾತ್ರ ಮರೀಚಿಕೆಯಾಗಿಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಕ್ಕಾಗಿ ಸಂತ್ರಸ್ತ ಕುಟುಂಬಸ್ಥರು ಹೋರಾಟ ಮಾಡುತ್ತಿದ್ದಾರೆ.

ಅಲ್ಲದೇ ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌ಅವರು, ಆಕ್ಸಿಜನ್‌ದುರಂತದ ಬಗ್ಗೆ ಮರು ತನಿಖೆ ನಡೆಸುವುದಾಗಿ ಹೇಳಿದ್ದರು. ಆದ್ರೆ ಇಲ್ಲಿಯವರೆಗೂ ಕೂಡ ಮರು ತನಿಖೆ ಮಾತ್ರ ಆರಂಭವಾಗಿಲ್ಲ. ಆಕ್ಸಿಜನ್‌ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಆಗಿಲ್ಲ. ಸರ್ಕಾರ ತಪ್ಪಿತಸ್ಥರನ್ನು ಬಚಾವ್‌ಮಾಡಲು ಮುಂದಾಗಿದ್ಯಾ ಎಂದು ಸಂತ್ರಸ್ತರ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago