ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಇಂದು ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ಶ್ರೀ ಬಸವ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿ ಮೆರವಣಿಗೆಗೆ ಚಾಮರಾಜನಗರ ವಿರಕ್ತ ಮಠಾಧ್ಯಕ್ಷರಾದ ಶ್ರೀ ಶ್ರೀ ಚನ್ನಬಸವಸ್ವಾಮಿಗಳು ನಂದಿಕಂಬಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಶ್ರೀ ಬಸವೇಶ್ವರ ಮೂರ್ತಿಯ ಮೆರವಣಿಗೆಯಲ್ಲಿ ಅಕ್ಕಪಕ್ಕದ ಊರಿನ ೫೦ಕ್ಕೂ ಹೆಚ್ಚು ನಂದಿಕಂಬಗಳು ಭಾಗಿಯಾಗಿದ್ದವು. ಇಂದು ಬೆಳಿಗ್ಗೆ ೧೦ ಗಂಟೆಗೆ ಆರಂಭವಾದ ಮೆರವಣಿಗೆಯು ಊರ ತುಂಬೆಲ್ಲಾ ಸಾಗಿತು.
ಇನ್ನೂ ಬಸವ ಜಯಂತಿ ಅಂಗವಾಗಿ ಇಂದು ಸಂಜೆ ಎಲ್ಲಾ ಭಕ್ತರಿಗೂ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು. ಬಳಿಕ ನಡೆದ ಶಿವಕಥೆಯಲ್ಲಿ ನೂರಾರು ಭಕ್ತರು ಭಾಗಿಯಾಗಿ ಬಸವೇಶ್ವರರ ಕೃಪೆಗೆ ಪಾತ್ರರಾದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…