ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್ಲೈನ್ ಗೇಮ್ಗಳನ್ನು ನಿಷೇಧಿಸಬೇಕು ಎಂದು ರೈತ ಸಂಘದ ಹೆಗ್ಗವಾಡಿಪುರ ಮಹೆಶ್ ಕುಮಾರ್ ಆಗ್ರಹಿಸಿದರು.
ಆನ್ಲೈನ್ ಗೇಮ್ನ ಚಟಕ್ಕೆ ಬಲಿಯಾದ ಅನೇಕ ಯುವಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಹಲವು ಕುಟುಂಬಗಳು ಬೀದಿ ಪಾಲಾಗುತ್ತಿವೆ. ಈ ಪ್ರಕರಣಗಳು ವರದಿಯಾಗುತ್ತಿಲ್ಲ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇವುಗಳ ನಿಷೇಧಕ್ಕೆ ಕ್ರಮ ವಹಿಸದೇ ಮೌನವಾಗಿರುವುದು ವಿಪರ್ಯಾಸ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಆನ್ಲೈನ್ ಗೇಮ್ ನಿಷೇಧಿಸಬೇಕೆಂದು ಸಮಾಜದ ಪ್ರಜ್ಞಾವಂತರು ಒತ್ತಾಯ ಮಾಡುತ್ತಿದ್ದಾರೆ. ಆದರೂ ಸಂಸದರು, ಶಾಸಕರು ಧ್ವನಿ ಎತ್ತದಿರುವುದು ಖಂಡನೀಯ. ಏ.೨೫ರೊಳಗೆ ಆನ್ಲೈನ್ ಗೇಮ್ಗಳ ನಿಷೇಧಕ್ಕೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗಳ ಮುಂಭಾಗ ಜೂಜಾಟ ಆಡಿಸಲಾಗುವುದು ಎಂದು ಎಚ್ಚರಿಸಿದರು.
ಖಾಸಗಿ ಕಿರು ಹಣಕಾಸು ಸಂಸ್ಥೆಗಳು ಬಲವಂತವಾಗಿ ಸಾಲ ವಸೂಲಿಗಿಳಿದು ಕಿರುಕುಳ ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ವಿಧೇಯಕ ಅಂಗೀಕರಿಸಿದ್ದು ಸ್ವಾಗತಾರ್ಹ, ಸಾಲ ತೀರಿಸಲು ಸಾಧ್ಯವಾಗದೆ ಮನೆ ಬಿಟ್ಟು ಹೊರ ಹೋಗಿರುವ ಕುಟುಂಬಗಳನ್ನು ವಾಪಸ್ ಅವರ ಗ್ರಾಮಗಳಿಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಚಾ.ನಗರ ತಾಲ್ಲೂಕು ಅಧ್ಯಕ್ಷ ಮಹೇಶ್ ಹಾಜರಿದ್ದರು.
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…
ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…