ಚಾಮರಾಜನಗರ

ಚಾ.ನಗರ | ಆನ್‌ಲೈನ್‌ ಗೇಮ್‌ ನಿಷೇಧಕ್ಕೆ ರೈತ ಸಂಘ ಆಗ್ರಹ

ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ  ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ರೈತ ಸಂಘದ ಹೆಗ್ಗವಾಡಿಪುರ ಮಹೆಶ್ ಕುಮಾರ್ ಆಗ್ರಹಿಸಿದರು.

ಆನ್‌ಲೈನ್ ಗೇಮ್‌ನ ಚಟಕ್ಕೆ ಬಲಿಯಾದ ಅನೇಕ ಯುವಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಹಲವು ಕುಟುಂಬಗಳು ಬೀದಿ ಪಾಲಾಗುತ್ತಿವೆ. ಈ ಪ್ರಕರಣಗಳು ವರದಿಯಾಗುತ್ತಿಲ್ಲ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇವುಗಳ ನಿಷೇಧಕ್ಕೆ ಕ್ರಮ ವಹಿಸದೇ ಮೌನವಾಗಿರುವುದು ವಿಪರ್ಯಾಸ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಆನ್‌ಲೈನ್ ಗೇಮ್ ನಿಷೇಧಿಸಬೇಕೆಂದು ಸಮಾಜದ ಪ್ರಜ್ಞಾವಂತರು ಒತ್ತಾಯ ಮಾಡುತ್ತಿದ್ದಾರೆ. ಆದರೂ ಸಂಸದರು, ಶಾಸಕರು ಧ್ವನಿ ಎತ್ತದಿರುವುದು ಖಂಡನೀಯ. ಏ.೨೫ರೊಳಗೆ ಆನ್‌ಲೈನ್ ಗೇಮ್‌ಗಳ ನಿಷೇಧಕ್ಕೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗಳ ಮುಂಭಾಗ ಜೂಜಾಟ ಆಡಿಸಲಾಗುವುದು ಎಂದು ಎಚ್ಚರಿಸಿದರು.

ಖಾಸಗಿ ಕಿರು ಹಣಕಾಸು ಸಂಸ್ಥೆಗಳು ಬಲವಂತವಾಗಿ ಸಾಲ ವಸೂಲಿಗಿಳಿದು ಕಿರುಕುಳ ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ವಿಧೇಯಕ ಅಂಗೀಕರಿಸಿದ್ದು ಸ್ವಾಗತಾರ್ಹ, ಸಾಲ ತೀರಿಸಲು ಸಾಧ್ಯವಾಗದೆ ಮನೆ ಬಿಟ್ಟು ಹೊರ ಹೋಗಿರುವ ಕುಟುಂಬಗಳನ್ನು ವಾಪಸ್ ಅವರ ಗ್ರಾಮಗಳಿಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಚಾ.ನಗರ ತಾಲ್ಲೂಕು ಅಧ್ಯಕ್ಷ ಮಹೇಶ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago