ಚಾಮರಾಜನಗರ

ಚಾ.ನಗರ | ಆನ್‌ಲೈನ್‌ ಗೇಮ್‌ ನಿಷೇಧಕ್ಕೆ ರೈತ ಸಂಘ ಆಗ್ರಹ

ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ  ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ರೈತ ಸಂಘದ ಹೆಗ್ಗವಾಡಿಪುರ ಮಹೆಶ್ ಕುಮಾರ್ ಆಗ್ರಹಿಸಿದರು.

ಆನ್‌ಲೈನ್ ಗೇಮ್‌ನ ಚಟಕ್ಕೆ ಬಲಿಯಾದ ಅನೇಕ ಯುವಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಹಲವು ಕುಟುಂಬಗಳು ಬೀದಿ ಪಾಲಾಗುತ್ತಿವೆ. ಈ ಪ್ರಕರಣಗಳು ವರದಿಯಾಗುತ್ತಿಲ್ಲ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇವುಗಳ ನಿಷೇಧಕ್ಕೆ ಕ್ರಮ ವಹಿಸದೇ ಮೌನವಾಗಿರುವುದು ವಿಪರ್ಯಾಸ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಆನ್‌ಲೈನ್ ಗೇಮ್ ನಿಷೇಧಿಸಬೇಕೆಂದು ಸಮಾಜದ ಪ್ರಜ್ಞಾವಂತರು ಒತ್ತಾಯ ಮಾಡುತ್ತಿದ್ದಾರೆ. ಆದರೂ ಸಂಸದರು, ಶಾಸಕರು ಧ್ವನಿ ಎತ್ತದಿರುವುದು ಖಂಡನೀಯ. ಏ.೨೫ರೊಳಗೆ ಆನ್‌ಲೈನ್ ಗೇಮ್‌ಗಳ ನಿಷೇಧಕ್ಕೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗಳ ಮುಂಭಾಗ ಜೂಜಾಟ ಆಡಿಸಲಾಗುವುದು ಎಂದು ಎಚ್ಚರಿಸಿದರು.

ಖಾಸಗಿ ಕಿರು ಹಣಕಾಸು ಸಂಸ್ಥೆಗಳು ಬಲವಂತವಾಗಿ ಸಾಲ ವಸೂಲಿಗಿಳಿದು ಕಿರುಕುಳ ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ವಿಧೇಯಕ ಅಂಗೀಕರಿಸಿದ್ದು ಸ್ವಾಗತಾರ್ಹ, ಸಾಲ ತೀರಿಸಲು ಸಾಧ್ಯವಾಗದೆ ಮನೆ ಬಿಟ್ಟು ಹೊರ ಹೋಗಿರುವ ಕುಟುಂಬಗಳನ್ನು ವಾಪಸ್ ಅವರ ಗ್ರಾಮಗಳಿಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಚಾ.ನಗರ ತಾಲ್ಲೂಕು ಅಧ್ಯಕ್ಷ ಮಹೇಶ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago