Mysore
26
scattered clouds

Social Media

ಮಂಗಳವಾರ, 16 ಜೂನ್ 2026
Light
Dark

ಚಾಮರಾಜನಗರ: ಹುಲಿ ದಾಳಿಗೆ 3 ಮೇಕೆಗಳು ಬಲಿ

ಪ್ರಸಾದ್‌ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು 

ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3 ಮೇಕೆಗಳು ಬಲಿಯಾಗಿವೆ.

ಗ್ರಾಮದ ಜಯರಾಂ ಎಂಬುವರಿಗೆ ಸೇರಿದ 3 ಮೇಕೆಗಳು ಮೃತಪಟ್ಟಿವೆ. ಎಂದಿನಂತೆ ಸೋಮವಾರ ಬೆಳಿಗ್ಗೆ ಜಯರಾಂ ತಮ್ಮ ಮೇಕೆಗಳನ್ನು ಮೇಯಿಸಲು ಎಣ್ಣೆಹೊಳೆ ಮಹದೇಶ್ವರ ಬೆಟ್ಟ ತಪ್ಪಲಿಗೆ ಹೊಡೆದುಕೊಂಡು ಹೋಗಿದ್ದರು.

ಮಧ್ಯಾಹ್ನದ ವೇಳೆ ಹುಲಿಯೊಂದು 3 ಮೇಕೆಗಳ ಮೇಲೆ ದಾಳಿ ಮಾಡಿದೆ. ಕೂಡಲೇ ಈ ವೇಳೆ ಜಯರಾಂ ಕಿರುಚಿಕೊಂಡಿದ್ದಾರೆ. ಹುಲಿ 2 ಮೇಕೆಗಳ ಕುತ್ತಿಗೆಯನ್ನು ಕಚ್ಚಿ ರಕ್ತ ಹೀರಿ ಸಾಯಿಸಿ ಸ್ಥಳದಲ್ಲೇ ಬಿಟ್ಟು ಹೋದರೆ, ಮತ್ತೊಂದು ಮೇಕೆಯನ್ನು ಎಳೆದೊಯ್ಯಿತು ಎಂದು ಜಯರಾಂ ತಿಳಿಸಿದ್ದಾರೆ.

ಬಡಗಲಪುರ ಸಮೀಪ ಎಣ್ಣೆಹೊಳೆ ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶವಿದ್ದು, ಈ ಭಾಗದಲ್ಲಿ ಹುಲಿ ಹಾಗೂ ಚಿರತೆ ಓಡಾಡಿಕೊಂಡಿವೆ. ಆಗಾಗ್ಗೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿವೆ. ಸೋಮವಾರ ಹುಲಿಯು ಮೇಕೆಗಳನ್ನು ಸಾಯಿಸಿದೆ. ಅರಣ್ಯ ಇಲಾಖೆಯವರು ಮುನ್ನೆಚ್ಚರಿಕೆಯಾಗಿ ಹುಲಿ ಸೆರೆಗೆ ಕ್ರಮ ವಹಿಸಬೇಕೆದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಸಾಮಾಜಿಕ ವಲಯದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

 

Tags:
error: Content is protected !!