ಪ್ರಸಾದ್ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು
ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3 ಮೇಕೆಗಳು ಬಲಿಯಾಗಿವೆ.
ಗ್ರಾಮದ ಜಯರಾಂ ಎಂಬುವರಿಗೆ ಸೇರಿದ 3 ಮೇಕೆಗಳು ಮೃತಪಟ್ಟಿವೆ. ಎಂದಿನಂತೆ ಸೋಮವಾರ ಬೆಳಿಗ್ಗೆ ಜಯರಾಂ ತಮ್ಮ ಮೇಕೆಗಳನ್ನು ಮೇಯಿಸಲು ಎಣ್ಣೆಹೊಳೆ ಮಹದೇಶ್ವರ ಬೆಟ್ಟ ತಪ್ಪಲಿಗೆ ಹೊಡೆದುಕೊಂಡು ಹೋಗಿದ್ದರು.
ಮಧ್ಯಾಹ್ನದ ವೇಳೆ ಹುಲಿಯೊಂದು 3 ಮೇಕೆಗಳ ಮೇಲೆ ದಾಳಿ ಮಾಡಿದೆ. ಕೂಡಲೇ ಈ ವೇಳೆ ಜಯರಾಂ ಕಿರುಚಿಕೊಂಡಿದ್ದಾರೆ. ಹುಲಿ 2 ಮೇಕೆಗಳ ಕುತ್ತಿಗೆಯನ್ನು ಕಚ್ಚಿ ರಕ್ತ ಹೀರಿ ಸಾಯಿಸಿ ಸ್ಥಳದಲ್ಲೇ ಬಿಟ್ಟು ಹೋದರೆ, ಮತ್ತೊಂದು ಮೇಕೆಯನ್ನು ಎಳೆದೊಯ್ಯಿತು ಎಂದು ಜಯರಾಂ ತಿಳಿಸಿದ್ದಾರೆ.
ಬಡಗಲಪುರ ಸಮೀಪ ಎಣ್ಣೆಹೊಳೆ ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶವಿದ್ದು, ಈ ಭಾಗದಲ್ಲಿ ಹುಲಿ ಹಾಗೂ ಚಿರತೆ ಓಡಾಡಿಕೊಂಡಿವೆ. ಆಗಾಗ್ಗೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿವೆ. ಸೋಮವಾರ ಹುಲಿಯು ಮೇಕೆಗಳನ್ನು ಸಾಯಿಸಿದೆ. ಅರಣ್ಯ ಇಲಾಖೆಯವರು ಮುನ್ನೆಚ್ಚರಿಕೆಯಾಗಿ ಹುಲಿ ಸೆರೆಗೆ ಕ್ರಮ ವಹಿಸಬೇಕೆದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಸಾಮಾಜಿಕ ವಲಯದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…