ಚಾಮರಾಜನಗರ : ಇಲ್ಲಿನ ಸೇವಾಭಾರತಿ ಪಬ್ಲಿಕ್ ಶಾಲೆಯ ಐವರು ಬಾಲಕಿಯರು ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆಯ ಲ್ಲಿ ಜಯಿಸಿ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದವರು.
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಹಾಗೂ ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಅಯೋಜಿಸಲಾಗಿದ್ದ ಪ್ರೌಢಶಾಲಾ ಮಟ್ಟದ ಬಾಲಕಿಯರ ವಿಭಾಗದಲ್ಲಿ ಮೂರು ಸುತ್ತಿನ ಸ್ಪರ್ಧೆಯಲ್ಲಿ ಸೆಣಸಿ ಅಂತಿಮವಾಗಿ ಉಡುಪಿ ಜಿಲ್ಲಾ ತಂಡದ ವಿರುದ್ಧ ಗೆದ್ದಿದ್ದಾರೆ.
ದಕ್ಷಿಣ ಕನ್ನಡ, ಬೆಂಗಳೂರು, ಉಡುಪಿ, ಚಾಮರಾಜನಗರ ಜಿಲ್ಲೆಗಳ ಬಾಲಕಿಯರು ಉಡುಪಿ ಹೆಬ್ರಿಯಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ವಿಜೇತರಾದ ಚಾ.ನಗರದ ಬಾಲಕಿಯರಿಗೆ ಚಿನ್ನದ ಪದಕ, ಪ್ರಮಾಣ ಪತ್ರವನ್ನು ಬುಧವಾರ ಪ್ರದಾನ ಮಾಡಿ, ಈ ತಂಡಕ್ಕೆ ಟ್ರೋಫಿ ನೀಡಲಾಗಿದೆ.
ನಗರದ ಚನ್ನೀಪುರಮೋಳೆಯ ಸೇವಾ ಭಾರತಿ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ರಾಧಿಕಾಗುಪ್ತ, ದೈಹಿಕ ಶಿಕ್ಷಣ ಶಿಕ್ಷಕರಾದ ರೇಖಾ, ಬಾಲಕೃಷ್ಣ, ಚೆಸ್ ಕೋಚ್ ಕಿಶೋರ್ ಕುವಾರ್ ಮತ್ತು ಶಾಲಾ ಆಡಳಿತ ಮಂಡಳಿಯವರು ಬಾಲಕಿಯರಿಗೆ
ಅಭಿನಂದನೆ ಸಲ್ಲಿಸಿ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…