ಚಾಮರಾಜನಗರ

ಸಾರ್ವಜನಿಕ ಕಾಮಗಾರಿಗಳಿಗೆ ನಾಗರಿಕರ ಸಹಕರ ಮುಖ್ಯ: ಶಾಸಕ ಎಂ ಆರ್‌ ಮಂಜುನಾಥ್‌

ಹನೂರು: ಗ್ರಾಮದ ಅಭಿವೃದ್ಧಿಗಾಗಿ ಸಾರ್ವಜನಿಕ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ನಾಗರಿಕರು ಸಹಕರಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ತಾಲ್ಲೂಕಿನ ಹೂಗ್ಯಂ, ರಾಮಾಪುರ, ಕೌದಳ್ಳಿ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ 9 ಕೋಟಿ ಅಂದಾಜು ವೆಚ್ಚದಲ್ಲಿ ಪಂಚಾಯತ್ ರಾಜ್ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಬೂದು ನೀರು ನಿರ್ವಹಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪೈಲೆಟ್ ಪ್ರಾಜೆಕ್ಟ್ ಯೋಜನೆಗೆ ನಮ್ಮ ತಾಲ್ಲೂಕಿನ 3 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಮುಖ್ಯವಾಗಿ ಚರಂಡಿ ಮತ್ತು ಸಿಕ್ ಫಿಟ್ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಚರಂಡಿ ನೀರನ್ನು ಸ್ವಚ್ಛಗೊಳಿಸಿ ಕೆರೆಗಳಿಗೆ ನೀಡುವುದಾಗಿದೆ. ಇದರಿಂದ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುಲು ಸಹಕಾರಿಯಾಗುತ್ತದೆ . ಇದೊಂದು ವೈಜ್ಞಾನಿಕ ತಳಹದಿಯ ಮೇಲೆ ಅನುಷ್ಠಾನಗೊಳಿಸುತ್ತಿರುವ ಯೋಜನೆಯಾಗಿದೆ ಎಂದು ತಿಳಿಸಿದರು.

ಸರ್ಕಾರದ ವಿನೂತನ ಕಾರ್ಯಕ್ರಮವು ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ವರದಾನವಾಗಿದೆ. ಜಿಲ್ಲೆಯಲ್ಲಿ 11 ಗ್ರಾಮಗಳು ಆಯ್ಕೆಯಾಗಿದ್ದು ಹನೂರು ತಾಲ್ಲೂಕಿನ 3 ಗ್ರಾಮಗಳನ್ನು ಅಗತ್ಯಕ್ಕೆ ಅನುಸಾರವಾಗಿ ತಾಲೂಕಿನಲ್ಲಿ ಮೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಭಾಗಕ್ಕೆ ಇಂತಹ ಯೋಜನೆಗಳು ತುಂಬಾ ಅಗತ್ಯವಾಗಿದೆ.

ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಈ ಯೋಜನೆಯನ್ನು ಇತರೆ ಗ್ರಾಮಗಳಿಗೆ ವಿಸ್ತರಿಸುವಂತೆ ಆಗಬೇಕು. ಅದಕ್ಕಾಗಿ ಗ್ರಾಮ ಪಂಚಾಯತಿ ಸದಸ್ಯರು, ಸಾರ್ವಜನಿಕರು ತಮ್ಮ ಸ್ವಪ್ರತಿಷ್ಠೆ ಬಿಟ್ಟು ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಮಹಾದೇವ ಪ್ರಸಾದ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಉಮೇಶ್, ಎಡಿ ರವೀಂದ್ರ, ಪಿಡಿಒ ಪುಷ್ಪಲತಾ, ಗ್ರಾ.ಪಂ.ಅಧ್ಯಕ್ಷೆ ಮುರುಗೇಶ್ವರಿ ರಾಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ , ಉಪಾಧ್ಯಕ್ಷೆ ರಾಜಮ್ಮ, ಸದಸ್ಯರುಗಳಾದ ಚಿಕ್ಕಯ್ಯ, ವೀರೇಶ್, ಪಳನಿಸ್ವಾಮಿ,ರಾಜಣ್ಣ, ರಾಜ,ರವಿಕುಮಾರ್, ಸುಬ್ಬಮ್ಮ, ಪೆರುಮಾಳ್,  ಮುಖಂಡರುಗಳಾದ ಮಂಜೇಶ್ ಗೌಡ,ಯರಂಬಾಡಿ ಹುಚ್ಚಯ್ಯ, ಮಾಣಿಕ್ಯ, ಮುನಿಯಪ್ಪ, ಅರುಳ್ ಸ್ವಾಮಿ, ಶ್ರೀರಂಗಂ, ವೆಂಕಟರಾಮ,ಸುಬ್ರಮಣಿ, ಮಹದೇವ್, ಅತಿಕ್ ಕೌದಳ್ಳಿ ನಭಿ ,ರಾಚಪ್ಪ, ಕೆಂಪಲಿಂಗ,ಬಾಬು,ಸಾರ್ವಜನಿಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

2 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

18 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

19 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

20 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

20 hours ago