ಹನೂರು: ಗ್ರಾಮದ ಅಭಿವೃದ್ಧಿಗಾಗಿ ಸಾರ್ವಜನಿಕ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ನಾಗರಿಕರು ಸಹಕರಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ತಾಲ್ಲೂಕಿನ ಹೂಗ್ಯಂ, ರಾಮಾಪುರ, ಕೌದಳ್ಳಿ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ 9 ಕೋಟಿ ಅಂದಾಜು ವೆಚ್ಚದಲ್ಲಿ ಪಂಚಾಯತ್ ರಾಜ್ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಬೂದು ನೀರು ನಿರ್ವಹಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪೈಲೆಟ್ ಪ್ರಾಜೆಕ್ಟ್ ಯೋಜನೆಗೆ ನಮ್ಮ ತಾಲ್ಲೂಕಿನ 3 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಮುಖ್ಯವಾಗಿ ಚರಂಡಿ ಮತ್ತು ಸಿಕ್ ಫಿಟ್ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಚರಂಡಿ ನೀರನ್ನು ಸ್ವಚ್ಛಗೊಳಿಸಿ ಕೆರೆಗಳಿಗೆ ನೀಡುವುದಾಗಿದೆ. ಇದರಿಂದ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುಲು ಸಹಕಾರಿಯಾಗುತ್ತದೆ . ಇದೊಂದು ವೈಜ್ಞಾನಿಕ ತಳಹದಿಯ ಮೇಲೆ ಅನುಷ್ಠಾನಗೊಳಿಸುತ್ತಿರುವ ಯೋಜನೆಯಾಗಿದೆ ಎಂದು ತಿಳಿಸಿದರು.
ಸರ್ಕಾರದ ವಿನೂತನ ಕಾರ್ಯಕ್ರಮವು ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ವರದಾನವಾಗಿದೆ. ಜಿಲ್ಲೆಯಲ್ಲಿ 11 ಗ್ರಾಮಗಳು ಆಯ್ಕೆಯಾಗಿದ್ದು ಹನೂರು ತಾಲ್ಲೂಕಿನ 3 ಗ್ರಾಮಗಳನ್ನು ಅಗತ್ಯಕ್ಕೆ ಅನುಸಾರವಾಗಿ ತಾಲೂಕಿನಲ್ಲಿ ಮೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಭಾಗಕ್ಕೆ ಇಂತಹ ಯೋಜನೆಗಳು ತುಂಬಾ ಅಗತ್ಯವಾಗಿದೆ.
ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಈ ಯೋಜನೆಯನ್ನು ಇತರೆ ಗ್ರಾಮಗಳಿಗೆ ವಿಸ್ತರಿಸುವಂತೆ ಆಗಬೇಕು. ಅದಕ್ಕಾಗಿ ಗ್ರಾಮ ಪಂಚಾಯತಿ ಸದಸ್ಯರು, ಸಾರ್ವಜನಿಕರು ತಮ್ಮ ಸ್ವಪ್ರತಿಷ್ಠೆ ಬಿಟ್ಟು ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಮಹಾದೇವ ಪ್ರಸಾದ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಉಮೇಶ್, ಎಡಿ ರವೀಂದ್ರ, ಪಿಡಿಒ ಪುಷ್ಪಲತಾ, ಗ್ರಾ.ಪಂ.ಅಧ್ಯಕ್ಷೆ ಮುರುಗೇಶ್ವರಿ ರಾಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ , ಉಪಾಧ್ಯಕ್ಷೆ ರಾಜಮ್ಮ, ಸದಸ್ಯರುಗಳಾದ ಚಿಕ್ಕಯ್ಯ, ವೀರೇಶ್, ಪಳನಿಸ್ವಾಮಿ,ರಾಜಣ್ಣ, ರಾಜ,ರವಿಕುಮಾರ್, ಸುಬ್ಬಮ್ಮ, ಪೆರುಮಾಳ್, ಮುಖಂಡರುಗಳಾದ ಮಂಜೇಶ್ ಗೌಡ,ಯರಂಬಾಡಿ ಹುಚ್ಚಯ್ಯ, ಮಾಣಿಕ್ಯ, ಮುನಿಯಪ್ಪ, ಅರುಳ್ ಸ್ವಾಮಿ, ಶ್ರೀರಂಗಂ, ವೆಂಕಟರಾಮ,ಸುಬ್ರಮಣಿ, ಮಹದೇವ್, ಅತಿಕ್ ಕೌದಳ್ಳಿ ನಭಿ ,ರಾಚಪ್ಪ, ಕೆಂಪಲಿಂಗ,ಬಾಬು,ಸಾರ್ವಜನಿಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…