ಚಾಮರಾಜನಗರ

ಸಾರ್ವಜನಿಕ ಕಾಮಗಾರಿಗಳಿಗೆ ನಾಗರಿಕರ ಸಹಕರ ಮುಖ್ಯ: ಶಾಸಕ ಎಂ ಆರ್‌ ಮಂಜುನಾಥ್‌

ಹನೂರು: ಗ್ರಾಮದ ಅಭಿವೃದ್ಧಿಗಾಗಿ ಸಾರ್ವಜನಿಕ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ನಾಗರಿಕರು ಸಹಕರಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ತಾಲ್ಲೂಕಿನ ಹೂಗ್ಯಂ, ರಾಮಾಪುರ, ಕೌದಳ್ಳಿ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ 9 ಕೋಟಿ ಅಂದಾಜು ವೆಚ್ಚದಲ್ಲಿ ಪಂಚಾಯತ್ ರಾಜ್ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಬೂದು ನೀರು ನಿರ್ವಹಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪೈಲೆಟ್ ಪ್ರಾಜೆಕ್ಟ್ ಯೋಜನೆಗೆ ನಮ್ಮ ತಾಲ್ಲೂಕಿನ 3 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಮುಖ್ಯವಾಗಿ ಚರಂಡಿ ಮತ್ತು ಸಿಕ್ ಫಿಟ್ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಚರಂಡಿ ನೀರನ್ನು ಸ್ವಚ್ಛಗೊಳಿಸಿ ಕೆರೆಗಳಿಗೆ ನೀಡುವುದಾಗಿದೆ. ಇದರಿಂದ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುಲು ಸಹಕಾರಿಯಾಗುತ್ತದೆ . ಇದೊಂದು ವೈಜ್ಞಾನಿಕ ತಳಹದಿಯ ಮೇಲೆ ಅನುಷ್ಠಾನಗೊಳಿಸುತ್ತಿರುವ ಯೋಜನೆಯಾಗಿದೆ ಎಂದು ತಿಳಿಸಿದರು.

ಸರ್ಕಾರದ ವಿನೂತನ ಕಾರ್ಯಕ್ರಮವು ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ವರದಾನವಾಗಿದೆ. ಜಿಲ್ಲೆಯಲ್ಲಿ 11 ಗ್ರಾಮಗಳು ಆಯ್ಕೆಯಾಗಿದ್ದು ಹನೂರು ತಾಲ್ಲೂಕಿನ 3 ಗ್ರಾಮಗಳನ್ನು ಅಗತ್ಯಕ್ಕೆ ಅನುಸಾರವಾಗಿ ತಾಲೂಕಿನಲ್ಲಿ ಮೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಭಾಗಕ್ಕೆ ಇಂತಹ ಯೋಜನೆಗಳು ತುಂಬಾ ಅಗತ್ಯವಾಗಿದೆ.

ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಈ ಯೋಜನೆಯನ್ನು ಇತರೆ ಗ್ರಾಮಗಳಿಗೆ ವಿಸ್ತರಿಸುವಂತೆ ಆಗಬೇಕು. ಅದಕ್ಕಾಗಿ ಗ್ರಾಮ ಪಂಚಾಯತಿ ಸದಸ್ಯರು, ಸಾರ್ವಜನಿಕರು ತಮ್ಮ ಸ್ವಪ್ರತಿಷ್ಠೆ ಬಿಟ್ಟು ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಮಹಾದೇವ ಪ್ರಸಾದ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಉಮೇಶ್, ಎಡಿ ರವೀಂದ್ರ, ಪಿಡಿಒ ಪುಷ್ಪಲತಾ, ಗ್ರಾ.ಪಂ.ಅಧ್ಯಕ್ಷೆ ಮುರುಗೇಶ್ವರಿ ರಾಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ , ಉಪಾಧ್ಯಕ್ಷೆ ರಾಜಮ್ಮ, ಸದಸ್ಯರುಗಳಾದ ಚಿಕ್ಕಯ್ಯ, ವೀರೇಶ್, ಪಳನಿಸ್ವಾಮಿ,ರಾಜಣ್ಣ, ರಾಜ,ರವಿಕುಮಾರ್, ಸುಬ್ಬಮ್ಮ, ಪೆರುಮಾಳ್,  ಮುಖಂಡರುಗಳಾದ ಮಂಜೇಶ್ ಗೌಡ,ಯರಂಬಾಡಿ ಹುಚ್ಚಯ್ಯ, ಮಾಣಿಕ್ಯ, ಮುನಿಯಪ್ಪ, ಅರುಳ್ ಸ್ವಾಮಿ, ಶ್ರೀರಂಗಂ, ವೆಂಕಟರಾಮ,ಸುಬ್ರಮಣಿ, ಮಹದೇವ್, ಅತಿಕ್ ಕೌದಳ್ಳಿ ನಭಿ ,ರಾಚಪ್ಪ, ಕೆಂಪಲಿಂಗ,ಬಾಬು,ಸಾರ್ವಜನಿಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago