ಚಾಮರಾಜನಗರ

ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಗೆ ವಿದ್ಯುಕ್ತ ಚಾಲನೆ

ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ ದೊರಕಿದೆ.

ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನ ಮುಂದೆ ಇರುವ ಚಂದ್ರಮಂಡಲ ಕಟ್ಟೆಯ ಮೇಲೆ ಸಿದ್ಧವಾಗಿದ್ದ ಬಿದರಿನ ಸಿದ್ದಪ್ಪಾಜಿ ಚಂದ್ರಮಂಡಲಕ್ಕೆ ಬೊಪ್ಪೆಗೌಡನಪುರ ಮಠದ ಜ್ಞಾನನಂದರಾಜೇ ಅರಸ್ ಅಗ್ನಿ ಸ್ಪರ್ಶ ಮಾಡಿದರು.

ಇದಕ್ಕೂ ಮುನ್ನ ಹಳೇ ಮಠದಿಂದ ತಮಟೆ, ಡೊಳ್ಳು, ಜಾಗಟೆ, ಕೊಂಬು, ಕಹಳೆ ಶಬ್ದದೊಂದಿಗೆ ನಿಶಾನೆ, ಛತ್ರಿ, ಚಾಮರ, ಸತ್ತಿಗೆ, ಸೂರಪಾನಿ, ಚನ್ನಯ್ಯ ಲಿಂಗಯ್ಯ ಉರಿ ಕಂಡಾಯಗಳೊಡನೆ ಬಸವನನ್ನು ಮುಂದೆ ಬಿಟ್ಟುಕೊಂಡು ಬೊಪ್ಪೆಗೌಡನಪುರದ ಧರೆಗೆ ದೊಡ್ಡವರ ಸ್ವಾಮೀಜಿ ಶ್ರೀ ಜ್ಞಾನನಂದ ಚನ್ನರಾಜೇ ಅರಸ್ ಅವರು ಆಗಮಿಸಿ ಶ್ರೀ ಸಿದ್ದಪ್ಪಾಜಿ ಐಕ್ಯ ಗದ್ದುಗೆಗೆ ಪೂಜಾಕೈಕರ್ಯಗಳನ್ನು ನಡೆಸಿದರು.

ಚಿಕ್ಕಲ್ಲೂರು ಜಾತ್ರೆಯ ಚಂದ್ರಮಂಡಲ ಸುತ್ತಲೂ ಇರುವ ಗ್ರಾಮಸ್ಥರು ನೀಡಿದ ಹಚ್ಚೆ, ಬಿದಿರು, ಪಂಜು ಎಣ್ಣೆ ಇತರೆ ಸಾಮಗ್ರಿಗಳನ್ನು ಸೇರಿಸಿ ಘನನೀಲಿಯ ಗದ್ದುಗೆ ಚಂದ್ರಮಂಡಲ ಕಟ್ಟೆಯಲ್ಲಿ ಸಿದ್ದಪಡ್ಡಿಸಿದ್ದ ಸಿದ್ದಪ್ಪಾಜಿ ಚಂದ್ರಮಂಡಲದಲ್ಲಿ ಸುತ್ತ ಮೂರು ಪ್ರದಕ್ಷಣೆಗಳನ್ನು ಹಾಕಿದ ಸ್ವಾಮಿಗಳು ನಂತರ ವೀಶೆಷ ಪೂಜೆ ಸಲ್ಲಿಸಿದರು.

ಐದು ದಿನಗಳ ಜಾತ್ರೆ
ಜ.೩ರ ಶನಿವಾರ ಚಂದ್ರಮಂಡಲೋತ್ಸವ, ಜ.೪ ಭಾನುವಾರ ಹುಲಿವಾಹನೋತ್ಸವ, ಜ.೫ರ ಸೋಮವಾರ ಮಂಟಪೋತ್ಸವ (ಮುಡಿಸೇವೆ), ಜ.೬ರ ಮಂಗಳವಾರ ಗಜವಾಹನೋತ್ಸವ (ಪಂಕ್ತಿಸೇವೆ), ಜ.೭ರ ಬುಧವಾರ ಮುತ್ತರಾಯನ ಸೇವೆ ನಡೆಯಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

4 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

4 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

4 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

5 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

5 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

5 hours ago