ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ ದೊರಕಿದೆ.
ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನ ಮುಂದೆ ಇರುವ ಚಂದ್ರಮಂಡಲ ಕಟ್ಟೆಯ ಮೇಲೆ ಸಿದ್ಧವಾಗಿದ್ದ ಬಿದರಿನ ಸಿದ್ದಪ್ಪಾಜಿ ಚಂದ್ರಮಂಡಲಕ್ಕೆ ಬೊಪ್ಪೆಗೌಡನಪುರ ಮಠದ ಜ್ಞಾನನಂದರಾಜೇ ಅರಸ್ ಅಗ್ನಿ ಸ್ಪರ್ಶ ಮಾಡಿದರು.
ಇದಕ್ಕೂ ಮುನ್ನ ಹಳೇ ಮಠದಿಂದ ತಮಟೆ, ಡೊಳ್ಳು, ಜಾಗಟೆ, ಕೊಂಬು, ಕಹಳೆ ಶಬ್ದದೊಂದಿಗೆ ನಿಶಾನೆ, ಛತ್ರಿ, ಚಾಮರ, ಸತ್ತಿಗೆ, ಸೂರಪಾನಿ, ಚನ್ನಯ್ಯ ಲಿಂಗಯ್ಯ ಉರಿ ಕಂಡಾಯಗಳೊಡನೆ ಬಸವನನ್ನು ಮುಂದೆ ಬಿಟ್ಟುಕೊಂಡು ಬೊಪ್ಪೆಗೌಡನಪುರದ ಧರೆಗೆ ದೊಡ್ಡವರ ಸ್ವಾಮೀಜಿ ಶ್ರೀ ಜ್ಞಾನನಂದ ಚನ್ನರಾಜೇ ಅರಸ್ ಅವರು ಆಗಮಿಸಿ ಶ್ರೀ ಸಿದ್ದಪ್ಪಾಜಿ ಐಕ್ಯ ಗದ್ದುಗೆಗೆ ಪೂಜಾಕೈಕರ್ಯಗಳನ್ನು ನಡೆಸಿದರು.
ಚಿಕ್ಕಲ್ಲೂರು ಜಾತ್ರೆಯ ಚಂದ್ರಮಂಡಲ ಸುತ್ತಲೂ ಇರುವ ಗ್ರಾಮಸ್ಥರು ನೀಡಿದ ಹಚ್ಚೆ, ಬಿದಿರು, ಪಂಜು ಎಣ್ಣೆ ಇತರೆ ಸಾಮಗ್ರಿಗಳನ್ನು ಸೇರಿಸಿ ಘನನೀಲಿಯ ಗದ್ದುಗೆ ಚಂದ್ರಮಂಡಲ ಕಟ್ಟೆಯಲ್ಲಿ ಸಿದ್ದಪಡ್ಡಿಸಿದ್ದ ಸಿದ್ದಪ್ಪಾಜಿ ಚಂದ್ರಮಂಡಲದಲ್ಲಿ ಸುತ್ತ ಮೂರು ಪ್ರದಕ್ಷಣೆಗಳನ್ನು ಹಾಕಿದ ಸ್ವಾಮಿಗಳು ನಂತರ ವೀಶೆಷ ಪೂಜೆ ಸಲ್ಲಿಸಿದರು.
ಐದು ದಿನಗಳ ಜಾತ್ರೆ
ಜ.೩ರ ಶನಿವಾರ ಚಂದ್ರಮಂಡಲೋತ್ಸವ, ಜ.೪ ಭಾನುವಾರ ಹುಲಿವಾಹನೋತ್ಸವ, ಜ.೫ರ ಸೋಮವಾರ ಮಂಟಪೋತ್ಸವ (ಮುಡಿಸೇವೆ), ಜ.೬ರ ಮಂಗಳವಾರ ಗಜವಾಹನೋತ್ಸವ (ಪಂಕ್ತಿಸೇವೆ), ಜ.೭ರ ಬುಧವಾರ ಮುತ್ತರಾಯನ ಸೇವೆ ನಡೆಯಲಿದೆ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…