ಚಾಮರಾಜನಗರ

ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಗೆ ವಿದ್ಯುಕ್ತ ಚಾಲನೆ

ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ ದೊರಕಿದೆ.

ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನ ಮುಂದೆ ಇರುವ ಚಂದ್ರಮಂಡಲ ಕಟ್ಟೆಯ ಮೇಲೆ ಸಿದ್ಧವಾಗಿದ್ದ ಬಿದರಿನ ಸಿದ್ದಪ್ಪಾಜಿ ಚಂದ್ರಮಂಡಲಕ್ಕೆ ಬೊಪ್ಪೆಗೌಡನಪುರ ಮಠದ ಜ್ಞಾನನಂದರಾಜೇ ಅರಸ್ ಅಗ್ನಿ ಸ್ಪರ್ಶ ಮಾಡಿದರು.

ಇದಕ್ಕೂ ಮುನ್ನ ಹಳೇ ಮಠದಿಂದ ತಮಟೆ, ಡೊಳ್ಳು, ಜಾಗಟೆ, ಕೊಂಬು, ಕಹಳೆ ಶಬ್ದದೊಂದಿಗೆ ನಿಶಾನೆ, ಛತ್ರಿ, ಚಾಮರ, ಸತ್ತಿಗೆ, ಸೂರಪಾನಿ, ಚನ್ನಯ್ಯ ಲಿಂಗಯ್ಯ ಉರಿ ಕಂಡಾಯಗಳೊಡನೆ ಬಸವನನ್ನು ಮುಂದೆ ಬಿಟ್ಟುಕೊಂಡು ಬೊಪ್ಪೆಗೌಡನಪುರದ ಧರೆಗೆ ದೊಡ್ಡವರ ಸ್ವಾಮೀಜಿ ಶ್ರೀ ಜ್ಞಾನನಂದ ಚನ್ನರಾಜೇ ಅರಸ್ ಅವರು ಆಗಮಿಸಿ ಶ್ರೀ ಸಿದ್ದಪ್ಪಾಜಿ ಐಕ್ಯ ಗದ್ದುಗೆಗೆ ಪೂಜಾಕೈಕರ್ಯಗಳನ್ನು ನಡೆಸಿದರು.

ಚಿಕ್ಕಲ್ಲೂರು ಜಾತ್ರೆಯ ಚಂದ್ರಮಂಡಲ ಸುತ್ತಲೂ ಇರುವ ಗ್ರಾಮಸ್ಥರು ನೀಡಿದ ಹಚ್ಚೆ, ಬಿದಿರು, ಪಂಜು ಎಣ್ಣೆ ಇತರೆ ಸಾಮಗ್ರಿಗಳನ್ನು ಸೇರಿಸಿ ಘನನೀಲಿಯ ಗದ್ದುಗೆ ಚಂದ್ರಮಂಡಲ ಕಟ್ಟೆಯಲ್ಲಿ ಸಿದ್ದಪಡ್ಡಿಸಿದ್ದ ಸಿದ್ದಪ್ಪಾಜಿ ಚಂದ್ರಮಂಡಲದಲ್ಲಿ ಸುತ್ತ ಮೂರು ಪ್ರದಕ್ಷಣೆಗಳನ್ನು ಹಾಕಿದ ಸ್ವಾಮಿಗಳು ನಂತರ ವೀಶೆಷ ಪೂಜೆ ಸಲ್ಲಿಸಿದರು.

ಐದು ದಿನಗಳ ಜಾತ್ರೆ
ಜ.೩ರ ಶನಿವಾರ ಚಂದ್ರಮಂಡಲೋತ್ಸವ, ಜ.೪ ಭಾನುವಾರ ಹುಲಿವಾಹನೋತ್ಸವ, ಜ.೫ರ ಸೋಮವಾರ ಮಂಟಪೋತ್ಸವ (ಮುಡಿಸೇವೆ), ಜ.೬ರ ಮಂಗಳವಾರ ಗಜವಾಹನೋತ್ಸವ (ಪಂಕ್ತಿಸೇವೆ), ಜ.೭ರ ಬುಧವಾರ ಮುತ್ತರಾಯನ ಸೇವೆ ನಡೆಯಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

2 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

3 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

3 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

4 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

4 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

5 hours ago