ಚಾಮರಾಜನಗರ

ರಾಮನಗುಡ್ಡ ಜಲಾಶಯದ ಒತ್ತುವರಿ ತೆರವು : ನೀರು ತುಂಬಿಸಲು ಕ್ರಮ

ಹನೂರು : ತಾಲೂಕಿನ ರಾಮನಗುಡ್ಡ ಜಲಾಶಯದ ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿರುವ 98 ಎಕರೆ ಜಾಗವನ್ನು ಒತ್ತುವರಿ ತೆರವು ಮಾಡಿ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನ ಗುಡ್ಡ ಜಲಾಶಯದ ಸರ್ವೆ ಕಾರ್ಯ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ರಾಮನಗುಡ್ಡ ಜಲಾಶಯದ ಅಕ್ಕಪಕ್ಕದ ರೈತರು ಹಲವಾರು ವರ್ಷಗಳಿಂದ ಸುಮಾರು 98 ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ.

ಈಗಾಗಲೇ ಹಲವು ದೂರುಗಳು ಬಂದಿದ್ದು ಒತ್ತುವರಿ ತೆರವು ಮಾಡಲು ಭೂಮಾಪನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಜಂಟಿ ಸರ್ವೆ ನಡೆಸಲಾಗುತ್ತಿದೆ. ನಂತರ ಜಲಾಶಯದ ಗಡಿ ರೇಖೆ ಗುರುತಿಸಿ ಒತ್ತುವರಿ ಜಮೀನನ್ನು ತೆರವು ಮಾಡಿದ ನಂತರ ನೀರು ತುಂಬಿಸುವ ಯೋಜನೆಗೆ ಸಹಕರಿಸಬೇಕು ಎಂದು ತಿಳಿಸಿದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೈತರಿಗೆ ನೀರಾವರಿ ಯೋಜನೆಯನ್ನು ಕಲ್ಪಿಸಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಈ ಒಂದು ಯೋಜನೆ ಯಶಸ್ವಿಯಾಗಲು ರೈತರು ಹಾಗೂ ಸ್ಥಳೀಯರ ಸಹಕಾರ ಅತಿ ಮುಖ್ಯವಾಗಿದೆ ಎಂದರು. ಈಗಾಗಲೇ ಕಾವೇರಿ ನದಿಯಿಂದ ರಾಮನಗುಡ್ಡ ಜಲಾಶಯಕ್ಕೆ ನೀರನ್ನು ಹರಿಸಲು ಅಗತ್ಯ ಕ್ರಮ ವಹಿಸಲಾಗಿದೆ 2.5 ಕೋಟಿ ವೆಚ್ಚದಲ್ಲಿ ಬಾಕಿ ಉಳಿದಿರುವ 1.45 ಕಿ.ಲೋ ಪೈಪ್ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ ಕೆರೆಗೆ ನೀರು ತುಂಬಿಸಲು ಕ್ರಮ ವಹಿಸಲಾಗುತ್ತಿದೆ. ರೈತರ ಬಹುದಿನಗಳ ಕನಸು ನನಸಾಗುವ ದಿನ ಕೆಲವೇ ದಿನಗಳಲ್ಲಿ ಬರಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರೈತ ಮುಖಂಡರಲ್ಲಿ ಹರ್ಷ ರಾಮನ ಗುಡ್ಡ ಜಲಾಶಯ ನಿರ್ಮಾಣ ಮಾಡಿದ ದಿನದಿಂದ ಯಾವೊಬ್ಬ ಜನಪ್ರತಿನಿಧಿಗಳು ಒತ್ತುವರಿ ಜಮೀನನ್ನು ತೆರೆವು ಮಾಡಲು ಮುಂದಾಗಿರಲಿಲ್ಲ ಆದರೆ ಶಾಸಕ ಮಂಜುನಾಥ್ ರವರು ಕೊಟ್ಟ ಭರವಸೆಯಂತೆ ಭೂಮಾಪನ ಇಲಾಖೆಯವರನ್ನು ಕರೆತಂದು ಗಡಿ ಗುರುತಿಸಿ ಒತ್ತುವರಿ ತೆರವು ಮಾಡಲು ಮುಂದಾಗಿದ್ದಾರೆ.

ಈಗಾಗಲೇ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ನೀರು ಹರಿದು ಬರಲಿದೆ ಇದರಿಂದ ಹಲವಾರು ವರ್ಷಗಳಿಂದ ಸ್ಥಗಿತವಾಗಿದ್ದ ಕಾಮಗಾರಿ ವೇಗ ಪಡೆದುಕೊಂಡಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಪರಿಶೀಲನೆ ವೇಳೆ ಭೂ ಮಾಪನ ಇಲಾಖೆಯ ಎಸ್ ಇ ಚೇತನ್ ಕುಮಾರ್ ನೀರಾವರಿ ಇಲಾಖೆಯ ಎಇಇ ಅಭಿಲಾಶ್ ಜೆ.ಇ ಪ್ರತಾಪ್ ಸರ್ವೆ ಇಲಾಖೆಯ ಸಿಬ್ಬಂದಿಗಳು ಹಾಗೂ ರೈತ ಮುಖಂಡರುಗಳು ಹಾಜರಿದ್ದರು .

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

18 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

44 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

47 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago