ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಎಂಆರ್ ಮಂಜುನಾಥ್ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಭಾನುವಾರ ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಶಾಸಕ ಮಂಜುನಾಥ್ ಅವರನ್ನು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್ ಬರಮಾಡಿಕೊಂಡರು.
ಇದೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ, ಸಂಸದ ಸುನೀಲ್ ಬೋಸ್ ಹಾಗೂ ರೈತರ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿ ಪೂಜೆ ಸಲ್ಲಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನೂರು ತಾಲೂಕಿನ ರಾಮಪುರ ಹೋಬಳಿ ವ್ಯಾಪ್ತಿಯ ರೈತರು ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೇ ಅಂತರ್ಜಲ ಮಟ್ಟ ಕುಸಿದು ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದರು. ಈ ಭಾಗದ ಜನರಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಲು ಕಳೆದ ಮೂರು ವರ್ಷಗಳಿಂದ ಸತತ ಪ್ರಯತ್ನ ಮಾಡಲಾಗಿತ್ತು.
ಪವಾಡ ಪುರುಷ ಮಲೆ ಮಹದೇಶ್ವರನ ಆಶೀರ್ವಾದದಿಂದ ಈ ಬಾರಿಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯರವರು 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿದ್ದಾರೆ.
ಅತಿ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಶೀಘ್ರದಲ್ಲೇ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಲು ಸೂಕ್ತ ಕ್ರಮ ವಹಿಸಲಾಗುವುದು. ಈ ಯೋಜನೆ ಪೂರ್ಣಗೊಂಡರೆ, ರಾಮಾಪುರ ಹೋಬಳಿ ವ್ಯಾಪ್ತಿಗೆ ಶಾಶ್ವತ ನೀರಾವರಿ ಯೋಜನೆ ಸಿಗಲಿದೆ. ಇದರಿಂದ ರೈತರು ಆರ್ಥಿಕವಾಗಿ ಸದೃಢರಾಗಬಹುದು ಇದಲ್ಲದೆ ವ್ಯಾಪಾರ ವಹಿವಾಟು ಸಹ ವೃದ್ಧಿಯಾಗಲಿದೆ ಎಂದರು.
ಇದೇ ವೇಳೆ ಪ್ರಾಧಿಕಾರದ ಉಪಕಾರ್ಯದರ್ಶಿ ಚಂದ್ರಶೇಖರ್, ಲೋಕೋಪಯೋಗಿ ಇಲಾಖೆಯ ಎಇಇ ಚಿನ್ನಣ್ಣ, ಮುಖಂಡರುಗಳಾದ ಡಿ. ಆರ್ ಮಾದೇಶ್, ಡಿ ಕೆ ರಾಜು, ಗುರುಸ್ವಾಮಿ, ನಾಗರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…