ಚಾಮರಾಜನಗರ

ಚಾಮರಾಜನಗರಕ್ಕೆ ಬಂದಾಗಲೆಲ್ಲಾ ಸಿಎಂ ಕುರ್ಚಿ ಗಟ್ಟಿಯಾಗಿದೆ: ಸಿದ್ದರಾಮಯ್ಯ

ಕೊಳ್ಳೇಗಾಲ: ಸಿಎಂ ಸಿದ್ದರಾಮಯ್ಯ ಇಂದು (ಡಿಸೆಂಬರ್‌ 7) ಚಾಮರಾಜನಗರ ಭೇಟಿ ನೀಡಿದ್ದು, ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದ ಅವರು ಚಾಮರಾಜನಗರ ಜಿಲ್ಲೆ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳದುಕೊಳ್ಳುತ್ತಾರೆ ಎಂಬ ಮಾತು ಈ ಹಿಂದಿನಿಂದಲೂ ಇದೆ. ಅಧಿಕಾರದಲ್ಲಿದ್ದಾಗ ಇಲ್ಲಿಗೆ ರಾಜಕಾರಣಿಗಳು ಭೇಟಿ ನೀಡಿದ್ದೂ ಸಹ ಕಡಿಮೆ. ಈ ಕುರಿತು ಮಾತನಾಡಿದ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆ ಘೋಷಣೆ ಮಾಡಿದ್ದವು. ಆಗ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಏನಿಲ್ಲವೆಂದರೂ 20 ಬಾರಿ ನಾನು ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಇಲ್ಲಿಗೆ ಬಂದಾಗಲೆಲ್ಲಾ ಅಧಿಕಾರ ಕಳೆದುಕೊಳ್ಳುವ ಬದಲು ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದರು.

ಇನ್ನು ಅತ್ಯಂತ ಸಂತಸದಿಂದ ನಾನು ಈ ಶಾಲೆಯ ಉದ್ಘಾಟನೆಯನ್ನು ಮಾಡಿದ್ದು, ಜಾನಪದ ಕಲೆಗಳ ತವರೂರು ಹಾಗೂ ದಕ್ಷಿಣದ ಗಡಿ ಚಾಮರಾಜನಗರ ಎಂದು ಮುಖ್ಯಮಂತ್ರಿಗಳು ಹೊಗಳಿದರು.

andolana

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

12 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

13 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

13 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

13 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

14 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

14 hours ago