Mysore
26
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಸಿದ್ದರಾಮಯ್ಯ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕವಾಡ್ತಿದ್ದಾರೆ: ಸಿಎಂ ವಿರುದ್ಧ ವಿಜಯೇಂದ್ರ ಕಿಡಿ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ.

ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಜನಸಾಮಾನ್ಯರು ಸಿದ್ದರಾಮಯ್ಯರಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ, ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು ದುಮ್ಮಾನಗಳಿಗೆ ಕಾಂಗ್ರೆಸ್‌ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆ.

ಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಸಿಎಂ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ. ಇಂತಹ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ, ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ. ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ ಎಂದು ಪ್ರಶ್ನಿಸಿದರು.

 

 

Tags:
error: Content is protected !!