ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಜನಸಾಮಾನ್ಯರು ಸಿದ್ದರಾಮಯ್ಯರಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ, ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು ದುಮ್ಮಾನಗಳಿಗೆ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆ.
ಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಸಿಎಂ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ. ಇಂತಹ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ, ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ. ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ ಎಂದು ಪ್ರಶ್ನಿಸಿದರು.
ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…