ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಜನಸಾಮಾನ್ಯರು ಸಿದ್ದರಾಮಯ್ಯರಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ, ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು ದುಮ್ಮಾನಗಳಿಗೆ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆ.
ಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಸಿಎಂ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ. ಇಂತಹ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ, ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ. ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ ಎಂದು ಪ್ರಶ್ನಿಸಿದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…