ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಜನಸಾಮಾನ್ಯರು ಸಿದ್ದರಾಮಯ್ಯರಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ, ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು ದುಮ್ಮಾನಗಳಿಗೆ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆ.
ಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಸಿಎಂ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ. ಇಂತಹ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ, ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ. ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ ಎಂದು ಪ್ರಶ್ನಿಸಿದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…