ಚಾಮರಾಜನಗರ

ಸಿದ್ದರಾಮಯ್ಯ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕವಾಡ್ತಿದ್ದಾರೆ: ಸಿಎಂ ವಿರುದ್ಧ ವಿಜಯೇಂದ್ರ ಕಿಡಿ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ.

ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಜನಸಾಮಾನ್ಯರು ಸಿದ್ದರಾಮಯ್ಯರಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ, ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು ದುಮ್ಮಾನಗಳಿಗೆ ಕಾಂಗ್ರೆಸ್‌ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆ.

ಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಸಿಎಂ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ. ಇಂತಹ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ, ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ. ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ ಎಂದು ಪ್ರಶ್ನಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

2 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

2 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago