ಚಾಮರಾಜನಗರ

ನ. 20ಕ್ಕೆ ಚಾ.ನಗರಕ್ಕೆ ಸಿಎಂ : ರಾಜ್ಯ ಸಹಕಾರ ಸಪ್ತಾಹ ಸಮಾರೋಪದಲ್ಲಿ ಭಾಗಿ ; ಸುಮಾರು 30ಸಾವಿರ ಜನ ಸೆರುವ ನಿರೀಕ್ಷೆ

ಚಾಮರಾಜನಗರ : ನಗರದಲ್ಲಿ ಇದೇ ನ.20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ನಡೆಸಲು ನಿರ್ಧರಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕೆ.ಎಂ.ಎಫ್‌ನ ವ್ಯವಸ್ಥಾಪಕ ನಿದೇಶಕ ಬಿ.ಶಿವಸ್ವಾಮಿ ತಿಳಿಸಿದರು.

ತಾಲ್ಲೂಕಿನ ಕುದೇರಿನಲ್ಲಿರುವ ಚಾಮುಲ್‌ ಕಚೇರಿಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದರು. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು ಇದರ ಸಮಾರೋಪ ಸಮಾರಂಭ ವನ್ನೂ ಅವರೇ ನಗರದಲ್ಲಿ ಉದ್ಘಾಟನೆ ಮಾಡಲಿದ್ದಾರೆ ಎಂದರು.

ಇದನ್ನೂ ಓದಿ:-ಅಂಬಾನಿ ಒಡೆತನದ 3 ಸಾವಿರ ಕೋಟಿ ಮೌಲ್ಯದ ಆಸ್ತಿ ಇಡಿ ವಶಕ್ಕೆ

ಮೈಸೂರು ವಿಭಾಗದಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಸುಮಾರು 30 ಸಾವಿರ ಜನರು ಸೇರುವ ನಿರೀಕ್ಷೆ ಇದ್ದು ಸಿದ್ಧತೆಗಾಗಿ 10 ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಯವರು ಅವರಿಗೆ ಕೊಟ್ಟಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೆಕು ಎಂದು ಹೇಳಿದರು.

ವಸ್ತು ಪ್ರದರ್ಶನ ವಿಷಯ ತಜ್ಞರಿಂದ ಉಪನ್ಯಾಸ ಮೊದಲಾದ ಕಾರ್ಯಕ್ರಮಗಳು ನಡೆಯುತ್ತವೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೆಕು ಎಂದು ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ,ಲೋಕಸಭಾ ಸದಸ್ಯ ಸುನಿಲ್ ಬೋಸ್ ,ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರುಗಳು ಈ ಸಮಾರಂಭಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಪೂರ್ವಭಾವಿಸಭೆಯಲ್ಲಿ ರಾಜ್ಯ ಹಾಲು ಮಹಾಮಂಡಳ ಆಡಳಿತಾಧಿಕಾರಿ ಟಿ. ಹೆಚ್.ಎಂ. ಕುಮಾರ್, ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಕೆಂದ್ರ ಬ್ಯಾಂಕ್‌ ಆಡಳಿತಾಧಿಕಾರಿ ಎಂ. ಆಶಾ, ಚಾಮುಲ್ ಅಧ್ಯಕ್ಷ ಎಂ ನಂಜುಂಡಸ್ವಾಮಿ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್ ಎಸ್. ನಂಜುಂಡ ಪ್ರಸಾದ್, ಮೈಮುಲ್ ಅಧ್ಯಕ್ಷ ಈರೇಗೌಡ, ಚಾಮುಲ್ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

8 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago