ಚಾಮರಾಜನಗರ

ಚಾಲಾಕಿಯಿಂದ ದುಡ್ಡು ಕಸಿಯುತ್ತಿರುವ ಸಿಎಂ : ಬಿ.ವೈ.ವಿಜಯೇಂದ್ರ

ತಿ.ನರಸೀಪುರ : ಹೆಚ್ಚು ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿಗಳು ಬಹಳ ಅನುಭವಿಯಾಗಿದ್ದು, ಬಹಳ ಚಾಲಾಕಿನಿಂದ ಒಂದೆಡೆ ಗ್ಯಾರಂಟಿ ಕೊಟ್ಟು, ಮತ್ತೊಂದು ಕಡೆ ಬೆಲೆ ಏರಿಸಿ ಕೈಯಿಂದ ದುಡ್ಡು ಕಿತ್ತುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.

ತಾಲ್ಲೂಕಿನ ಮೂಗೂರು ಗ್ರಾಮದಲ್ಲಿ ಸೋಮವಾರ ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಪರ ಚುನಾವಣಾ ಪ್ರಚಾರ ಭಾಷಣ ಮಾಡಿ ಮಾತನಾಡಿದರು.

ಎಸ್‌ಸಿ, ಎಸ್‌ಟಿಗೆ ಮೀಸಲಿಟ್ಟ ಅನುದಾನ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿ, ಆ ಸಮುದಾಯಗಳ ಅಭಿವೃದ್ಧಿ ಕುಂಠಿತಗೊಂಡಿದೆ. ಒಂದೆಡೆ ಉಚಿತ ನೀಡುವುದಾಗಿ ಹೇಳಿ ಮತ್ತೊಂದೆಡೆ ಹೆಚ್ಚುವರಿಯಾಗಿ ವಿದ್ಯುತ್ ಬಿಲ್ ವಸೂಲ್ ಮಾಡಲಾಗುತ್ತದೆ.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಕಾಣುತ್ತಿದೆ. ದೇಶದ ಜನತೆ ಈಗ ಮತ್ತೆ ಮೋದಿಯವರನ್ನು ಪ್ರಧಾನಿಯಾಗಲು ಬಯಸಿದ್ದಾರೆ. ದೇಶದ ಮಾಜಿ ಪ್ರಧಾನಿ ದೇವೇಗೌಡರು ಕೂಡ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವಂತೆ ಕರೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಭಾಗದ ಜನರು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಎಸ್.ಬಾಲರಾಜ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವ ಮೂಲಕ ಮೋದಿಯವರಿಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ ಎಂದು ಹೇಳಿದರು.

ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬರಗಾಲ ಬಂದಿದೆ. ರೈತರ ನೋವುಗಳಿಗೆ ಸರ್ಕಾರ ಸ್ಪಂದಿಸಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಮುಖ್ಯಮಂತ್ರಿಗಳು ವಿಫಲರಾಗಿದ್ದು, ರೈತರು ಕಣ್ಣೀರಿಡುವ ಪರಿಸ್ಥಿತಿಗೆ ತಂದಿಟ್ಟಿದ್ದಾರೆ ಎಂದರು.

ಸರ್ಕಾರ ಇದ್ದೂ ಸತ್ತಿಂತಿದೆ. ಭಿಕ್ಷುಕರಂತೆ ರೈತರಿಗೆ ೨ ಸಾವಿರ ರೂ. ಪರಿಹಾರ ನೀಡಿದೆ. ಬಿಜೆಪಿ ಅವಧಿ ವೇಳೆ ಟ್ರಾನ್ಸ್ ಫಾರ್ಮರ್‌ಗೆ ೨೫ ಸಾವಿರ ರೂ. ಕಟ್ಟಬೇಕಿತ್ತು. ಇಂದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ೩ ಲಕ್ಷ ರೂ. ಕಟ್ಟಬೇಕು. ನೋಂದಣಿ ಮಾಡಿಸಲು ಹೆಚ್ಚುವರಿ ಹಣ ಪಾವತಿಸಬೇಕಿದೆ.

ಅನುಭವಿ ಮುಖ್ಯಮಂತ್ರಿಗಳಿದ್ದರೂ ರಾಜ್ಯ ಸರ್ಕಾರ ಇಂದು ಜನರ ಅಭಿವೃದ್ಧಿ ಮಾಡುವಲ್ಲಿ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ಕೊಲೆಗಳಾಗುತ್ತಿದೆ. ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ಆರೋಪಿಸಿದರು.

ಅಭ್ಯರ್ಥಿ ಎಸ್.ಬಾಲರಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಯೊಬ್ಬ ಭಾರತೀಯನಿಗೂ ಶಕ್ತಿ ತುಂಬುತ್ತಿದ್ದಾರೆ. ೨೦೪೭ಕ್ಕೆ ವಿಕಸಿತ ಭಾರತಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ. ಅಂತಹ ಪ್ರಧಾನಿಯವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡಿದೆ. ಇಂತಹ ಸರ್ಕಾರದ ವಿರುದ್ಧ ಮತ ಚಲಾಯಿಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಈ ಕ್ಷೇತ್ರದಿಂದ ನನಗೆ ಹೆಚ್ಚಿನ ಮತ ನೀಡುವಂತೆ ಅವರು ಮನವಿ ಮಾಡಿದರು.

ಮಾಜಿ ಶಾಸಕ ಅಶ್ವಿನ್ ಕುವಾರ್,ಹನೂರು ಶಾಸಕ ಮಂಜುನಾಥ್, ಡಾ.ರೇವಣ್ಣ, ಮೈಸೂರು ಜಿಲ್ಲಾ ಗ್ರಾವಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮೈಮೂಲ್ ನಿರ್ದೇಶಕ ಅಶೋಕ್,ಜೆಡಿಎಸ್ ಕ್ಷೇತ್ರಾ ಧ್ಯಕ್ಷ ಚಿನ್ನಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಶಿವಕುವಾರ್,ಮೈಸೂರು ಜಿಲ್ಲಾ ಗ್ರಾವಾಂತರ ಬಿಜೆಪಿ ಪ್ರಧಾನ ಕಾಂರ್ುದರ್ಶಿ ಎನ್.ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಹೆಳವರಹುಂಡಿ ಸಿದ್ದಪ್ಪ, ಗೂಳಿ ಮಹೇಶ್ ಪುರಸಭಾ ಸದಸ್ಯ ಕಿರಣ್, ವಿಚಾರವಾದಿ ಪ್ರಭುಸ್ವಾಮಿ, ತಾ.ಪಂ.ವಾಜಿ ಸದಸ್ಯ ಚಂದ್ರಶೇಖರ್, ಎಂ. ಶಿವಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ರಘು ಕೌಟಿಲ್ಯ, ಜಿ.ಪಂ. ವಾಜಿ ಸದಸ್ಯ ಸದಾನಂದ, ಕೆ.ಸಿ.ಲೋಕೇಶ್ ನಾುಂಕ್,ುುಂವ ಮೋರ್ಚಾ ಜಿಲ್ಲಾಧ್ಯಕ್ಷ ಸಾವ್ರಾಟ್, ಗ್ರಾ.ಪಂ. ಉಪಾಧ್ಯಕ್ಷ ಕೈುಂಂಬಳ್ಳಿ ಅಶೋಕ್, ತೊಟ್ಟುವಾಡಿ ಅನಿಲ್ ಕುವಾರ್, ಬೆನಕನಹಳ್ಳಿ ವಿಜುಂಕುವಾರ್, ದಾಂನಂದ್ ಪಟೇಲ್ ಮತ್ತಿತರರು ಹಾಜರಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

2 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

2 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

2 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

2 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago