ಚಾಮರಾಜನಗರ : ತಾಲ್ಲೂಕಿನ ಬಸವಟ್ಟಿ ಗ್ರಾಮದ ಬಸ್ ನಿಲ್ದಾಣದ ಬಳಿ ಬುಧವಾರ ರಾತ್ರಿ ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೆ ಸವಾರರಿಬ್ಬರು ಮೃತಪಟ್ಟಿದ್ದಾರೆ.
ತಾಲ್ಲೂಕಿನ ಕಮರವಾಡಿ ಗ್ರಾಮದ ಮಹೇಶ್ (48) ಮತ್ತು ಕಿಶೋರ್ (46) ಮೃತರು. ಇವರಿಬ್ಬರು ಬುಧವಾರ ರಾತ್ರಿ 8 ಗಂಟೆ ಸಮಯದಲ್ಲಿ ಸ್ಕೂಟರ್ ನಲ್ಲಿ ಸಂತೇಮರಹಳ್ಳಿಯಿಂದ ಕಮರವಾಡಿ ಗ್ರಾಮಕ್ಕೆ ಹೋಗುತ್ತಿದ್ದರು.
ಇದೇ ಮಾರ್ಗವಾಗಿ ತಿ.ನರಸೀಪುರ ಕಡೆಯಿಂದ ಕೆಎಸ್ಆರ್ ಟಿಸಿ ಬಸ್ ಚಾಮರಾಜನಗರದ ಕಡೆಗೆ ಬರುತ್ತಿತ್ತು. ಬಸವಟ್ಟಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರರಾದ ಮಹೇಶ್ ಮತ್ತು ಕಿಶೋರ್ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿದೆ. ವಿಪರೀತ ರಕ್ತಸ್ರಾವವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಸಂತೇಮರಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಶವಗಳನ್ನು ವಶಕ್ಕೆ ಪಡೆದು ಚಾ.ನಗರದ ಹೊರವಲಯದ ಸಿಮ್ಸ್ ಬೋಧನಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.
ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…