ಚಾಮರಾಜನಗರ

ಬಸ್ – ಸ್ಕೂಟರ್ ನಡುವೆ ಡಿಕ್ಕಿ ; ಸ್ಥಳದಲ್ಲೇ ಇಬ್ಬರ ಸಾವು

ಚಾಮರಾಜನಗರ : ತಾಲ್ಲೂಕಿನ ಬಸವಟ್ಟಿ ಗ್ರಾಮದ ಬಸ್ ನಿಲ್ದಾಣದ ಬಳಿ ಬುಧವಾರ ರಾತ್ರಿ ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೆ ಸವಾರರಿಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕಮರವಾಡಿ ಗ್ರಾಮದ ಮಹೇಶ್ (48) ಮತ್ತು ಕಿಶೋರ್ (46) ಮೃತರು. ಇವರಿಬ್ಬರು ಬುಧವಾರ ರಾತ್ರಿ 8 ಗಂಟೆ ಸಮಯದಲ್ಲಿ ಸ್ಕೂಟರ್ ನಲ್ಲಿ ಸಂತೇಮರಹಳ್ಳಿಯಿಂದ ಕಮರವಾಡಿ ಗ್ರಾಮಕ್ಕೆ ಹೋಗುತ್ತಿದ್ದರು.

ಇದೇ ಮಾರ್ಗವಾಗಿ ತಿ.ನರಸೀಪುರ ಕಡೆಯಿಂದ ಕೆಎಸ್ಆರ್ ಟಿಸಿ ಬಸ್ ಚಾಮರಾಜನಗರದ ಕಡೆಗೆ ಬರುತ್ತಿತ್ತು. ಬಸವಟ್ಟಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರರಾದ ಮಹೇಶ್ ಮತ್ತು ಕಿಶೋರ್ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿದೆ. ವಿಪರೀತ ರಕ್ತಸ್ರಾವವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಸಂತೇಮರಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಶವಗಳನ್ನು ವಶಕ್ಕೆ ಪಡೆದು ಚಾ.ನಗರದ ಹೊರವಲಯದ ಸಿಮ್ಸ್ ಬೋಧನಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.

ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಸಾದ್‌ ಲಕ್ಕೂರು

ಚಾಮರಾಜನಗರ ಜಿಲ್ಲೆಯ ಲಕ್ಕೂರು ಗ್ರಾಮದವನಾದ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ.ಪತ್ರಿಕೋದ್ಯಮ ಪದವಿ ಪಡೆದಿದ್ದು ಕಳೆದ 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯ ಮಟ್ಟದ ಉಷಾ ಕಿರಣ, ವಿಜಯ ಕರ್ನಾಟಕ, ವಿಜಯವಾಣಿ, ಜಿಲ್ಲಾ ಮಟ್ಟದ ಪ್ರಜಾನುಡಿ, ಜನಮಿತ್ರ ಪತ್ರಿಕೆಗಳಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ 2 ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

12 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

12 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

12 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago