ಹನೂರು: ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂದುವರೆದ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಹಲವು ವರ್ಷಗಳ ಹಿಂದೆಯೇ ನಿರ್ಮಾಣ ಮಾಡಲಾಗಿದೆ.
ಆದರೆ ಮದುವೆ ಹಾಗೂ ಇನ್ನಿತರ ಶುಭ ಕಾರ್ಯಕ್ರಮಗಳನ್ನು ಮಾಡಲು ಅಡುಗೆ ಮನೆ ಇಲ್ಲದೆ ಇರುವುದರಿಂದ ತೊಂದರೆಯಾಗಿತ್ತು. ಈ ನಿಟ್ಟಿನಲ್ಲಿ ಗ್ರಾಮಸ್ಥರು ಅಡುಗೆ ಮನೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ 12 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.
ಇನ್ನು ಅಂಬೇಡ್ಕರ್ ಸಮುದಾಯ ಭವನಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ನೀಡಿ ಅಭಿವೃದ್ಧಿಪಡಿಸಲಾಗುವುದು. ಗ್ರಾಮಸ್ಥರು ಕಾಮಗಾರಿ ನಡೆಯುವ ವೇಳೆ ಸ್ಥಳದಲ್ಲಿದ್ದು ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದೇ ವೇಳೆ ನಿರ್ಮಿತಿ ಕೇಂದ್ರದ ಜೆಇ ರವಿಕುಮಾರ್, ಮುಖಂಡರಾದ ಚಿನ್ನಸ್ವಾಮಿ, ಜೆಸ್ಸಿಂಮ್ ಪಾಷಾ, ಡಿ.ಕೆ ರಾಜು, ಶಿವು, ಚನ್ನಾ ಲಿಂಗನಹಳ್ಳಿ ವೆಂಕಟೇಶ್ ಸೇರಿದಂತೆ ಹಲವರು ಹಾಜರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…