ಚಾಮರಾಜನಗರ

ಚಾಮರಾಜನಗರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಸಮಗ್ರ ಯೋಜನೆ: ವಿ.ಸೋಮಣ್ಣ

ಬೆಂಗಳೂರು, ನವೆಂಬರ್‌ 5: ಚಾಮರಾಜನಗರ ಜಿಲ್ಲೆಯ ಅಭಿವೃದ್ದಿ ಉದ್ದೇಶದಿಂದ ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ವಿಧಾನಸೌಧದ ಮೂರನೇ ಮಹಡಿಯ ಸಮಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಗಳ ಸಂಬಂಧ ನಡೆದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವ ಒಟ್ಟು 7 ಯೋಜನೆಗಳ ಪೈಕಿ 3 ಯೋಜನೆಗಳಿಗೆ 745 ಕೋಟಿ ರೂ. ಅಂದಾಜು ಮೊತ್ತಗಳಾಗಿವೆ. ಸದರಿ ಯೋಜನೆಗೆ ಈಗಾಗಲೇ ಅಂದಾಜು ಪರಿಶೀಲನಾ ಸಭೆಯಲ್ಲಿ ಮಂಡಿಸಿ ತೆರವು ಪಡೆಯಲಾಗಿದೆ. ಉಳಿದ 4 ಯೋಜನೆಗಳಿಗೆ ಹೊಸದಾಗಿ ಒಟ್ಟು 749 ಕೋಟಿ ರೂ. ವೆಚ್ಚದ ಅಂದಾಜು ಮೊತ್ತದ ಲೈನ್ ಡಿಪಿಆರ್ ಆಗಿದೆ. ಇದಕ್ಕೆ ವಿಸ್ತೃತ ಯೋಜನೆ ವರದಿಯನ್ನು ಅಂತಿಮಗೊಳಿಸಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಸರ್ವಾಂಗೀಣ ಪ್ರಗತಿ ದೃಷ್ಠಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳ ಅನುಷ್ಠಾನ ತೀರಾ ಅಗತ್ಯವಾಗಿದೆ. ಯೋಜನೆಯ ಜಾರಿ ತುರ್ತಾಗಿ ಆಗಬೇಕಿದೆ. ಆರ್ಥಿಕ ಇಲಾಖೆ ಅನುಮೋದನೆ, ಟೆಂಡರ್ ಪ್ರಕ್ರಿಯೆ ಇನ್ನಿತರ ಅವಶ್ಯಕ ಕ್ರಮಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿಕೊಂಡು ಶೀಘ್ರವೇ ಯೋಜನೆ ಚಾಲನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವರಾದ ವಿ. ಸೋಮಣ್ಣ ಹೇಳಿದರು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago