ಬೆಂಗಳೂರು, ನವೆಂಬರ್ 5: ಚಾಮರಾಜನಗರ ಜಿಲ್ಲೆಯ ಅಭಿವೃದ್ದಿ ಉದ್ದೇಶದಿಂದ ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ವಿಧಾನಸೌಧದ ಮೂರನೇ ಮಹಡಿಯ ಸಮಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಗಳ ಸಂಬಂಧ ನಡೆದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವ ಒಟ್ಟು 7 ಯೋಜನೆಗಳ ಪೈಕಿ 3 ಯೋಜನೆಗಳಿಗೆ 745 ಕೋಟಿ ರೂ. ಅಂದಾಜು ಮೊತ್ತಗಳಾಗಿವೆ. ಸದರಿ ಯೋಜನೆಗೆ ಈಗಾಗಲೇ ಅಂದಾಜು ಪರಿಶೀಲನಾ ಸಭೆಯಲ್ಲಿ ಮಂಡಿಸಿ ತೆರವು ಪಡೆಯಲಾಗಿದೆ. ಉಳಿದ 4 ಯೋಜನೆಗಳಿಗೆ ಹೊಸದಾಗಿ ಒಟ್ಟು 749 ಕೋಟಿ ರೂ. ವೆಚ್ಚದ ಅಂದಾಜು ಮೊತ್ತದ ಲೈನ್ ಡಿಪಿಆರ್ ಆಗಿದೆ. ಇದಕ್ಕೆ ವಿಸ್ತೃತ ಯೋಜನೆ ವರದಿಯನ್ನು ಅಂತಿಮಗೊಳಿಸಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲೆಯ ಸರ್ವಾಂಗೀಣ ಪ್ರಗತಿ ದೃಷ್ಠಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳ ಅನುಷ್ಠಾನ ತೀರಾ ಅಗತ್ಯವಾಗಿದೆ. ಯೋಜನೆಯ ಜಾರಿ ತುರ್ತಾಗಿ ಆಗಬೇಕಿದೆ. ಆರ್ಥಿಕ ಇಲಾಖೆ ಅನುಮೋದನೆ, ಟೆಂಡರ್ ಪ್ರಕ್ರಿಯೆ ಇನ್ನಿತರ ಅವಶ್ಯಕ ಕ್ರಮಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿಕೊಂಡು ಶೀಘ್ರವೇ ಯೋಜನೆ ಚಾಲನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವರಾದ ವಿ. ಸೋಮಣ್ಣ ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…