ಚಾಮರಾಜನಗರ

ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿ

ಚಾಮರಾಜನಗರ: ಚಾಮರಾಜನಗರದ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದೆ.

ವಿವಿಧ ಅಪರಾಧಗಳಲ್ಲಿ ನೂರಾರು ಮಂದಿ ಭಾಗಿಯಾಗಿ ಜೈಲು ಸೇರಿದ್ದರು. ಆಸಕ್ತಿಯುಳ್ಳಂತಹ ಯುವ ವಿಚಾರಣಾಧೀನ ಕೈದಿಗಳಿಗೆ ಚಾಮರಾಜನಗರ ಜಿಲ್ಲಾಡಳಿತದ ಸಹಾಯದೊಂದಿಗೆ ಇನ್ಪೋಸಿಸ್ ರೋಟರಿ ಕಡೆಯಿಂದ ಶಿಕ್ಷಣ, ಟ್ಯಾಲಿ, ಎಕ್ಸ್ ಎಲ್, ಡಾಟಾ ಎಂಟ್ರಿ ಸೇರಿ ವಿವಿಧ ಬಗೆಯ ಶಿಕ್ಷಣ ಹೇಳಿ ಕೊಡುತ್ತಿದ್ದಾರೆ.

ಕಾರಾಗೃಹದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಆಫ್ ಲೈನ್, ಆನ್ ಲೈನ್ ಕ್ಲಾಸಸ್​ ಮಾಡಲಾಗುತ್ತಿದೆ. ಇನ್ನು ವಿಚಾರಣಾಧೀನ ಕೈದಿಗಳು ಬಿಡುಗಡೆ ಬಳಿಕ ಅಪರಾಧ ಕೃತ್ಯದಲ್ಲಿ ಭಾಗಿಯಾಗದೆ ಸ್ವಾವಲಂಭಿಯಾಗಿ ಬದುಕಲು ಇದು ಸಹಾಯಕವಾಗಲಿದ್ದು, ಈ ನಿಟ್ಟಿನಲ್ಲಿ ಕಂಪ್ಯೂಟರ್ ತರಬೇತಿಯನ್ನು ಹೇಳಿಕೊಡಲಾಗುತ್ತಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

2 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

3 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

3 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

3 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago