ಚಾಮರಾಜನಗರ: ಬಿಜೆಪಿ ವಾಮ ಮಾರ್ಗಗಳ ಮೂಲಕ ದೇಶದ 140 ಕೋಟಿ ಜನರ ರಕ್ಷಣೆ ಮಾಡಲು ಇರುವ ಸಂವಿಧಾನವನ್ನು ನಾಶಮಾಡಲು ಮುಂದಾಗಿದೆ. ಕೋಮುವಾದವನ್ನು ಅಳಿಸಲು ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಲು ಕಾಂಗ್ರೆಸ್ ಗೆಲ್ಲಬೇಕು. ಹೀಗಾಗಿ ಈ ಬಾರಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಆಯ್ಕೆ ಮಾಡಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಮನವಿ ಮಾಡಿದರು.
ಚಾಮರಾಜನಗರ ಬ್ಲಾಕ್ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಧಾನಿ ನಮ್ಮನ್ನು ಆಳುತ್ತಿದ್ದು, ಇವರು ಇದನ್ನೇ ಸನಾತನವಾದ ಎಂದು ಹೇಳುತ್ತಾರೆ. ಬಿಜೆಪಿ ಅವಧಿಯಲ್ಲಿ ಹತ್ತು ವರ್ಷಗಳಿಂದ ದೇಶದ, ರೈತರ ಹಿತ ಕಾದಿಲ್ಲ. ರೈತರಿಗಾಗಿ ಇದ್ದ ಭೂ ಶಾಸಕ ಕಾಯ್ದೆಯನ್ನು ಸಹಾ ಬಿಜೆಪಿ ರದ್ದು ಮಾಡಿ ರೈತರ ಬದುಕನ್ನು ನಾಶ ಮಾಡಿದೆ ಎಂದು ಕಿಡಿಕಾರಿದರು.
ಯುಪಿಎ ಸರ್ಕಾರ ತನ್ನ ಅವಧಿಯಲ್ಲಿ ಆಹಾರ ಭದ್ರತೆ ಹಾಗೂ ಉದ್ಯೋಗ ಭದ್ರತೆ ಜಾರಿಗೊಳಿಸಿತು. ಆದರೆ ಬಿಜೆಪಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹಾಗೂ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿತ್ತು. ಯಾವುದನ್ನೂ ಮಾಡಲಿಲ್ಲ. ಆದರೆ ತಮ್ಮನ್ನು ಪ್ರಶ್ನೆ ಮಾಡುವವರ ವಿರುದ್ದ ಪ್ರಕರಣಗಳನ್ನು ದಾಖಲಿಸುತ್ತ ಬಿಜೆಪಿ ವಿರುದ್ಧ ಧ್ವನಿ ಎತ್ತುವವರ ಧ್ವನಿ ಅಡಗಿಸುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು.
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…