ಹನೂರು| ಕಗ್ಗತ್ತಲ್ಲಿನಲ್ಲಿದ್ದ ಎರಡು ಬಡ ಕುಟುಂಬಗಳಿಗೆ ಆಸರೆಯಾದ ಪೇದೆ ಕುಮಾರಸ್ವಾಮಿ: ಸಾರ್ವಜನಿಕರಿಂದ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ ಪ್ರತಿನಿತ್ಯ ಸೀಮೆಎಣ್ಣೆ ದೀಪ, ಮುಂಬತ್ತಿಯಲ್ಲಿ ವನ್ಯ ಮೃಗಗಳಂತೆ ಕಾಲ ಕಳೆಯುತ್ತಿದ್ದ ಎರಡು ಬಡ ಕುಟುಂಬಗಳಿಗೆ ಸ್ವಂತ ಹಣದಿಂದ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಕುಮಾರಸ್ವಾಮಿ ಮಾನವೀಯತೆ ಮೆರೆದಿದ್ದಾರೆ.

ಹೌದು ಚಾಮರಾಜನಗರ ತಾಲ್ಲೂಕಿನ ದಿ. ಮಾಜಿ ರಾಜ್ಯಪಾಲ ಆರ್ ರಾಚಯ್ಯ ಹಾಗೂ ಹಾಲಿ ಶಾಸಕ ಎ ಆರ್ ಕೃಷ್ಣ ಮೂರ್ತಿರವರ ತವರು ಗ್ರಾಮವಾದ ಆಲೂರು ಗ್ರಾಮದಲ್ಲಿನ ಮಹದೇವಮ್ಮ ಹಾಗೂ ರಾಜಮ್ಮ ಎಂಬುವವರು ಕಳೆದ 60 ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ಪ್ರತಿನಿತ್ಯ ಐದರಿಂದ 10 ಮುಂಬತ್ತಿ ಬಳಸಿ ಜೀವನ ನಡೆಸುತ್ತಿದ್ದರು.

ಕಳೆದ ತಿಂಗಳು ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಆಸರೆ ಕಾರ್ಯಕ್ರಮದ ಪ್ರಯುಕ್ತ ಪ್ರತಿಯೊಬ್ಬ ಪೇದೆಗಳಿಗೂ ನಿಗದಿತ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ವೃದ್ಧ ಕುಟುಂಬಗಳನ್ನು ಭೇಟಿ ಮಾಡಿ ಕಷ್ಟ ಸುಖಗಳನ್ನು ವಿಚಾರಿಸುವ ವೇಳೆ ನಮಗೆ ಯಾರು ದಿಕ್ಕಿಲ್ಲದೆ ಇರುವುದರಿಂದ ವಿದ್ಯುತ್ ಸಂಪರ್ಕ ಇಲ್ಲದೇ ಪ್ರತಿನಿತ್ಯ ತೊಂದರೆ ಆಗುತ್ತಿದೆ. ನಮಗೆ ವಿದ್ಯುತ್ ಸಂಪರ್ಕ ಕೊಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಹಿಂದೆ ಮುಂದೆ ಯಾವುದನ್ನು ಯೋಚಿಸದ ಕುಮಾರಸ್ವಾಮಿ ಅವರು ಎರಡು ಕುಟುಂಬಗಳಿಗೆ ತಮ್ಮ ಸ್ವಂತ ಹಣದಲ್ಲಿಯೇ ಸುಮಾರು 30 ಸಾವಿರಕ್ಕೂ ಹೆಚ್ಚು ಖರ್ಚು ಮಾಡಿ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ಮಾನವೀಯತೆ ಮರೆತಿದ್ದಾರೆ.

ಹಲವಾರು ವರ್ಷಗಳಿಂದ ಎರಡು ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕಗ್ಗತ್ತಲಲ್ಲಿ ಕಾಲ ಕಳೆಯುತ್ತಿದ್ದರು. ಜನಪ್ರತಿನಿಧಿಗಳು, ಸ್ಥಳೀಯರು ಇವರನ್ನು ಗುರುತಿಸಿರಲಿಲ್ಲ. ಆದರೆ ಪೊಲೀಸ್ ಇಲಾಖೆಯ ಆಸರೆ ಕಾರ್ಯಕ್ರಮದ ಮೂಲಕ ಆಸರೆ ಆಗಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ.

ಕುಮಾರಸ್ವಾಮಿರವರು ಈ ಹಿಂದೆ ಹನೂರು, ಚಾಮರಾಜನಗರ ಗ್ರಾಮಾಂತರ ಮಹಿಳಾ ಪೊಲೀಸ್ ಠಾಣೆಗಳಲ್ಲಿಯೂ ಉತ್ತಮವಾಗಿ ಕಾರ್ಯನಿರ್ವಹಿಸಿ ಅಧಿಕಾರಿಗಳಿಂದ ಪ್ರಶಂಸೆ ಪಡೆದುಕೊಂಡಿದ್ದಾರೆ. ಈಗ ಇವರ ಸೇವೆ ಇತರರಿಗೆ ಮಾದರಿಯಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

11 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

11 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

14 hours ago