ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ ಪ್ರತಿನಿತ್ಯ ಸೀಮೆಎಣ್ಣೆ ದೀಪ, ಮುಂಬತ್ತಿಯಲ್ಲಿ ವನ್ಯ ಮೃಗಗಳಂತೆ ಕಾಲ ಕಳೆಯುತ್ತಿದ್ದ ಎರಡು ಬಡ ಕುಟುಂಬಗಳಿಗೆ ಸ್ವಂತ ಹಣದಿಂದ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಕುಮಾರಸ್ವಾಮಿ ಮಾನವೀಯತೆ ಮೆರೆದಿದ್ದಾರೆ.
ಹೌದು ಚಾಮರಾಜನಗರ ತಾಲ್ಲೂಕಿನ ದಿ. ಮಾಜಿ ರಾಜ್ಯಪಾಲ ಆರ್ ರಾಚಯ್ಯ ಹಾಗೂ ಹಾಲಿ ಶಾಸಕ ಎ ಆರ್ ಕೃಷ್ಣ ಮೂರ್ತಿರವರ ತವರು ಗ್ರಾಮವಾದ ಆಲೂರು ಗ್ರಾಮದಲ್ಲಿನ ಮಹದೇವಮ್ಮ ಹಾಗೂ ರಾಜಮ್ಮ ಎಂಬುವವರು ಕಳೆದ 60 ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ಪ್ರತಿನಿತ್ಯ ಐದರಿಂದ 10 ಮುಂಬತ್ತಿ ಬಳಸಿ ಜೀವನ ನಡೆಸುತ್ತಿದ್ದರು.
ಕಳೆದ ತಿಂಗಳು ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಆಸರೆ ಕಾರ್ಯಕ್ರಮದ ಪ್ರಯುಕ್ತ ಪ್ರತಿಯೊಬ್ಬ ಪೇದೆಗಳಿಗೂ ನಿಗದಿತ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ವೃದ್ಧ ಕುಟುಂಬಗಳನ್ನು ಭೇಟಿ ಮಾಡಿ ಕಷ್ಟ ಸುಖಗಳನ್ನು ವಿಚಾರಿಸುವ ವೇಳೆ ನಮಗೆ ಯಾರು ದಿಕ್ಕಿಲ್ಲದೆ ಇರುವುದರಿಂದ ವಿದ್ಯುತ್ ಸಂಪರ್ಕ ಇಲ್ಲದೇ ಪ್ರತಿನಿತ್ಯ ತೊಂದರೆ ಆಗುತ್ತಿದೆ. ನಮಗೆ ವಿದ್ಯುತ್ ಸಂಪರ್ಕ ಕೊಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಹಿಂದೆ ಮುಂದೆ ಯಾವುದನ್ನು ಯೋಚಿಸದ ಕುಮಾರಸ್ವಾಮಿ ಅವರು ಎರಡು ಕುಟುಂಬಗಳಿಗೆ ತಮ್ಮ ಸ್ವಂತ ಹಣದಲ್ಲಿಯೇ ಸುಮಾರು 30 ಸಾವಿರಕ್ಕೂ ಹೆಚ್ಚು ಖರ್ಚು ಮಾಡಿ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ಮಾನವೀಯತೆ ಮರೆತಿದ್ದಾರೆ.
ಹಲವಾರು ವರ್ಷಗಳಿಂದ ಎರಡು ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕಗ್ಗತ್ತಲಲ್ಲಿ ಕಾಲ ಕಳೆಯುತ್ತಿದ್ದರು. ಜನಪ್ರತಿನಿಧಿಗಳು, ಸ್ಥಳೀಯರು ಇವರನ್ನು ಗುರುತಿಸಿರಲಿಲ್ಲ. ಆದರೆ ಪೊಲೀಸ್ ಇಲಾಖೆಯ ಆಸರೆ ಕಾರ್ಯಕ್ರಮದ ಮೂಲಕ ಆಸರೆ ಆಗಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ.
ಕುಮಾರಸ್ವಾಮಿರವರು ಈ ಹಿಂದೆ ಹನೂರು, ಚಾಮರಾಜನಗರ ಗ್ರಾಮಾಂತರ ಮಹಿಳಾ ಪೊಲೀಸ್ ಠಾಣೆಗಳಲ್ಲಿಯೂ ಉತ್ತಮವಾಗಿ ಕಾರ್ಯನಿರ್ವಹಿಸಿ ಅಧಿಕಾರಿಗಳಿಂದ ಪ್ರಶಂಸೆ ಪಡೆದುಕೊಂಡಿದ್ದಾರೆ. ಈಗ ಇವರ ಸೇವೆ ಇತರರಿಗೆ ಮಾದರಿಯಾಗಿದೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…