ಚಾಮರಾಜನಗರ

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ ಹಾಗೂ ಬರುವಂತಹ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಾಧುನಿಕ ವಿನೂತನ ಮಾದರಿಯಲ್ಲಿ ನಿರ್ಮಾಣ ಮಾಡಬೇಕು ಎಂದು ಶಾಸಕ ಎಂ.ಆರ್ .ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ 20 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಆಸ್ಪತ್ರೆ ಕಾಮಗಾರಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಹನೂರು ತಾಲೂಕು ಕೇಂದ್ರದಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣ ಮಾಡುವಂತೆ ಹಲವಾರು ದಿನಗಳಿಂದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ಮನವಿ ಮಾಡಿದ್ದರು. ಅದರಂತೆ 50 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಈ ಸಂಬಂಧ ಹನೂರು ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗಲಿದೆ. ಹನೂರು ತಾಲೂಕು ವ್ಯಾಪ್ತಿಯ ಗೋಪಿನಾಥಂ ಒಡೆಯರಪಾಳ್ಯ ಗ್ರಾಮದಲ್ಲಿಯೂ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ.

ಕೌದಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೂ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಬಜೆಟ್ ನಲ್ಲಿ ಘೋಷಣೆಯಾದರೆ ಅಲ್ಲಿಯೂ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಒಟ್ಟಾರೆಯಾಗಿ ಅವರು ಕ್ಷೇತ್ರದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕೆಂಬುದೇ ನನ್ನ ಗುರಿ ಎಂದರು.

ಪಟ್ಟಣದ ತಾಲ್ಲೂಕು ಕೇಂದ್ರದಲ್ಲಿ ಐವತ್ತು ಹಾಸಿಗೆ ಗಳ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ಆದರೆ ಮುಂದಿನ ಪೀಳಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂರು ಹಾಸಿಗೆಗಳ ಆಸ್ಪತ್ರೆ ಮಾದರಿಯಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿ ಪ್ರತಿಯೊಂದು ಸೌಲಭ್ಯಗಳು ಸಿಗುವ ನಿಟ್ಟಿನಲ್ಲಿ ಕಟ್ಟಡ ವಿನ್ಯಾಸಗೊಳಿಸಲಾಗಿದೆ. ಶವಗಾರವನ್ನು ಯಾರಿಗೂ ತೊಂದರೆಯಾಗದ ರೀತಿ ನಿರ್ಮಾಣ ಮಾಡಬೇಕು. ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ನನ್ನ ಗಮನಕ್ಕೆ ತಂದು ಕಟ್ಟಡ ನಿರ್ಮಾಣ ಮಾಡಬೇಕು ಸಂಬಂಧಪಟ್ಟ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಗುಣಮಟ್ಟದ ಕಾಮಗಾರಿ ನಡೆಯುವಂತೆ ಸೂಕ್ತ ಕ್ರಮ ವಹಿಸಬೇಕು ಎಂದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿಗಳಿಗೆ ವಸತಿಗೃಹದ ಅವಶ್ಯಕತೆ ಇದೆ ಎಂಬುದರ ಬಗ್ಗೆ ಮಾಹಿತಿ ನೀಡಿದರೆ ವಸತಿಗೃಹ ನಿರ್ಮಾಣ ಮಾಡಲು ಸರ್ಕಾರದಿಂದ ಹೆಚ್ಚಿನ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ಆಸ್ಪತ್ರೆಯ ಜೊತೆಗೆ ಮುಂದಿನ ದಿನಗಳಲ್ಲಿ ವಸತಿಗೃಹ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು. ಇದಲ್ಲದೆ ರೋಗಿಗಳ ಜೊತೆ ಬರುವಂತಹವರಿಗೂ ಡಾರ್ಮೆಟ್ರಿ ನಿರ್ಮಾಣ ಮಾಡಿ ಅವರಿಗೂ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಡಿಎಚ್ ಚಿದಂಬರಂರವರಿಗೆ ಸೂಚನೆ ನೀಡಿದರು.

ಬರುವಂತಹ ರೋಗಿಗಳು ಎಲ್ಲೆಂದರಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದೆ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಸ್ಪತ್ರೆ ಮುಂಭಾಗ ಮರಗಳನ್ನು ಬೆಳೆಸಿ ಆಸನದ ವ್ಯವಸ್ಥೆ ಮಾಡಿ ಒಳ್ಳೆಯ ವಾತಾವರಣ ಕಲ್ಪಿಸಿ ಕೊಡಬೇಕು ಎಂದರು.

ಇನ್ನು ಆಸ್ಪತ್ರೆಯ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವ ವೇಳೆ ಎತ್ತರವಾಗಿ ನಿರ್ಮಾಣ ಮಾಡದೆ ಆಕರ್ಷಕವಾಗಿ ಕಾಣುವಂತೆ ಗ್ರಿಲ್ಸ್ ಹಾಕಿ ಸುತ್ತು ಗೋಡೆ ನಿರ್ಮಾಣ ಮಾಡಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದರು.

ಪರಿಶೀಲನ ವೇಳೆ ಡಿಎಚ್ಓ ಡಾ.ಚಿದಂಬರಂ ತಾಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್, ಆರೋಗ್ಯ ಇಲಾಖೆಯ ಎಇ ಕಲ್ಯಾಣ ಸ್ವಾಮಿ, ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಆನಂದ್ ಕುಮಾರ್ ನಾಮನಿರ್ದೇಶಿತ ಸದಸ್ಯ ಮಹಾದೇಶ್, ಮುಖಂಡರಾದ ಮಂಜೇಶ್ ಗೌಡ ಚಿನ್ನ ವೆಂಕಟ, ಗೋವಿಂದ, ಮಂಜು, ವಿಜಯ್ ಕುಮಾರ್, ಪ್ರಸನ್ನ ಸೇರಿದಂತೆ ಇನ್ನಿತರರು ಹಾಜರಿದ್ದರು.

 

 

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

24 mins ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

1 hour ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

3 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

3 hours ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

3 hours ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

6 hours ago