ಚಾಮರಾಜನಗರ

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ ಇಲಾಖೆಯ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ಹನೂರು ತಾಲ್ಲೂಕಿನ ರಾಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಮರದೊಡ್ಡಿ ಗ್ರಾಮದ ತಂಗವೇಲು ಎಂಬುವವರಿಗೆ ಸೇರಿದ ಐದು ಹಸುಗಳನ್ನು ಅರಣ್ಯದಲ್ಲಿ ಮಧ್ಯಾಹ್ನ 12 ಗಂಟೆಯ ವೇಳೆ ಮೇವು ಮೇಯಲು ಬಿಡಲಾಗಿತ್ತು. ಸ್ವಲ್ಪ ಸಮಯ ಮೇವು ಮೇಯ್ದ ನಂತರ ಸಮೀಪದ ಕಂದಾಯ ಜಮೀನಿನಲ್ಲಿ ಹಸುಗಳು ನರಳಾಡುತ್ತಿದ್ದವು. ಇದನ್ನು ಗಮನಿಸಿದ ಸ್ಥಳೀಯರು ನೀರು ಕೊಡಿಸಿ ಸಮಾಧಾನ ಪಡಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕೆಲವು ನಿಮಿಷಗಳಲ್ಲಿ ಐದು ಹಸುಗಳು ಮೃತಪಟ್ಟಿವೆ. ಹಸುಗಳ ಸಾವಿಗೆ ಕಾರಣ ಏನೆಂಬುದನ್ನು ಹಿರಿಯ ತಜ್ಞ ವೈದ್ಯಾಧಿಕಾರಿಗಳು ಪತ್ತೆ ಹಚ್ಚಿ ಮತ್ತಷ್ಟು ಹಸುಗಳ ಮರಣ ಮೃದಂಗವನ್ನು ತಡೆಯಲು ಕ್ರಮವಹಿಸಬೇಕಿದೆ.

ಬುಧವಾರ ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಪರಶಿವಮೂರ್ತಿ ಎಂಬವರಿಗೆ ಸೇರಿದ ಆರು ಹಸುಗಳು ಬುಧವಾರ ಬೆಳಗ್ಗೆ ಜಮೀನಿನಲ್ಲಿ ಮೇವು ಮೇಯಲು ತೆರಳಿದ್ದ ವೇಳೆ ಅನುಮಾನಸ್ಪದವಾಗಿ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಬುಧವಾರವು 6 ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದವು. ಈ ವೇಳೆ ಹಸುವಿನ ಮಾಲೀಕ ಪರಶಿವಮೂರ್ತಿ ಅವರು ನಮ್ಮ ಹಸುಗಳಿಗೆ ಯಾರೋ ಕಿಡಿಗೇಡಿಗಳು ವಿಷ ಪ್ರಾಶನ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಘಟನಾ ಸ್ಥಳಕ್ಕೆ ಹನೂರು ತಾಲೂಕು ತಹಶೀಲ್ದಾರ್ ಚೈತ್ರ ಹಾಗೂ ಪಶುವೈದ್ಯಾಧಿಕಾರಿ ಡಾ.ಸಿದ್ದರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ನಂತರ ಡಾ.ಸಿದ್ದರಾಜುರವರು ಮೃತಪಟ್ಟಿದ್ದ ಆರು ಹಸುಗಳ ಮರಣೋತ್ತರ ಪರೀಕ್ಷೆ ನಡೆಸಿ ಹಸುಗಳ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಮೇಲ್ನೋಟಕ್ಕೆ ವಿಷಪೂರಿತ ಆಹಾರ ನೀರು ಸೇವನೆಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಿದ್ದರು.

ಇದೀಗ ಮತ್ತೆ 5 ಹಸುಗಳು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಂಬಂಧಪಟ್ಟ ಪಶುಸಂಗೋಪನ ಇಲಾಖೆ ಅಧಿಕಾರಿಗಳು ವಿಷಪೂರಿತ ಆಹಾರ ಸೇವನೆಯಿಂದ ಮೃತಪಟ್ಟಿದೆಯೇ ಎಂಬುದನ್ನು ದೃಢಪಡಿಸಬೇಕು ಅಥವಾ ಯಾರೋ ಕಿಡಿಗೇಡಿಗಳು ಮಾಡಿದ್ದರೆ ಪೊಲೀಸರು ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.

ಶೆಟ್ಟಳ್ಳಿಯಲ್ಲಿ 6 ಹಸುಗಳು ಮೃತಪಟ್ಟಿದ್ದರಿಂದ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿತ್ತು. ಇಂದು ಕೂಡ ರಾಮಾಪುರ ವ್ಯಾಪ್ತಿಯ ಮಾಮರ ದೊಡ್ಡಿಯಲ್ಲಿ ಐದು ಹಸುಗಳು ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಕಂದಾಯ ನಿರೀಕ್ಷಕರನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಈಗಾಗಲೇ ಪಶು ವೈದ್ಯಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು ಹಸುಗಳ ಸಾವಿಗೆ ನಿಖರ ಮಾಹಿತಿ ಕಲೆ ಹಾಕುವಂತೆ ಸೂಚನೆ ನೀಡಲಾಗಿದೆ. ಪ್ರಯೋಗಾಲಯದಿಂದ ವರದಿ ಬಂದ ನಂತರ ನಿಖರ ಮಾಹಿತಿ ತಿಳಿಯಲಿದೆ ಎಂದು ತಹಶೀಲ್ದಾರ್‌ ಚೈತ್ರಾ ಹೇಳಿದ್ದಾರೆ.

 

 

 

ಆಂದೋಲನ ಡೆಸ್ಕ್

Recent Posts

ಹುಲ್ಲಹಳ್ಳಿ | ಚಿರತೆ ದಾಳಿಗೆ ಎರಡು ಮೇಕೆ ಬಲಿ

ಹುಲ್ಲಹಳ್ಳಿ : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಭಾಗದ ಮೊತ್ತ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿ ಮಾಡಿ ಎರಡು ಮೇಕೆಯನ್ನು…

4 mins ago

ನೀರಿನ ಸುಳಿಗೆ ಸಿಲುಕಿ ಓರ್ವ ಸಾವು ; ಹೊಗೇನಕಲ್‌ ಫಾಲ್ಸ್‌ನಲ್ಲಿ ಘಟನೆ

ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ…

19 mins ago

ಪ್ರಯೋಗಾಲಯ ತಂತ್ರಜ್ಞರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಪ್ರಯೋಗ ಶಾಲಾ ತಾಂತ್ರಿಕ ವಲಯದಲ್ಲಿ ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

41 mins ago

ಬೆಂಗಳೂರು | 4 ವರ್ಷದ ಬಾಲಕಿ ಬರ್ಬರ ಹತ್ಯೆ ; ಅತ್ಯಾಚಾರ ಶಂಕೆ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…

1 hour ago

ಇರಾನ್‌ ಮೇಲೆ ರಣಭೀಕರ ದಾಳಿಗೆ ಅಮೆರಿಕ ಪ್ಲ್ಯಾನ್‌

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…

2 hours ago

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

3 hours ago